Breaking News

‘ಕೆರೆ ಬಳಿ ತಂದು ಕಸದ ಗುಂಪೆ ಹಾಕುತ್ತಾರೆ. ದಂಡೆ ಪಕ್ಕದಲ್ಲಿ ಶೌಚ ಮತ್ತು ಮೂತ್ರ ಮಾಡುತ್ತಾರೆ.

Spread the love

ಕಿತ್ತೂರು: ‘ಕೆರೆ ಬಳಿ ತಂದು ಕಸದ ಗುಂಪೆ ಹಾಕುತ್ತಾರೆ. ದಂಡೆ ಪಕ್ಕದಲ್ಲಿ ಶೌಚ ಮತ್ತು ಮೂತ್ರ ಮಾಡುತ್ತಾರೆ. ಮಾನವರ ಸತತ ಮಲೀನತೆಯ ‘ದಾಳಿ’ಗೆ ಒಳಗಾಗಿರುವ ಇಲ್ಲಿನ ಗುರುವಾರ ಪೇಟೆಯ ಐತಿಹಾಸಿಕ ರಣಗಟ್ಟಿ ಕೆರೆ ತನ್ನ ರಕ್ಷಣೆಗೆ ಮೊರೆ ಇಡುವಂತೆ ಭಾಸವಾಗುತ್ತಿದೆ’ ಎನ್ನುತ್ತಾರೆ ಜನರು.

ಮಲಿನಗೊಂಡ ಕೆರೆ: ರಕ್ಷಣೆಗೆ ಮೊರೆ

‘ಈ ಕೆರೆಗೂ ಒಂದು ಐತಿಹಾಸಿಕ ಹಿನ್ನೆಲೆಯಿದೆ. ಕ್ರಾಂತಿನೆಲದ ರಕ್ತಲೇಪಿತ ಖಡ್ಗವನ್ನು ಇದೇ ನೀರಿನಲ್ಲಿ ತೊಳೆಯುತ್ತಿದ್ದರು. ಹಾವು ಕಡಿದರೆ ಇಲ್ಲಿನ ನೀರು ಕುಡಿಯಲು ಕೊಡುತ್ತಿದ್ದರು. ಒಂದು ಕಾಲಕ್ಕೆ ಔಷಧಿಯ ಗುಣ ಹೊಂದಿರುವ ಈ ಕೆರೆಯ ನೀರನ್ನು ಮಲೀನತೆಯ ಹೊಂಡವಾಗಿ ನಾಗರಿಕ ವ್ಯವಸ್ಥೆಯು ಪರಿವರ್ತನೆ ಮಾಡಿದೆ’ ಎಂದು ಅವರು ದೂರುತ್ತಾರೆ.

‘ಹಲವು ದಶಕಗಳ ಹಿಂದೆ ಕೆರೆ ಬಳಿ ಇರುವ ಕೊಂಡವಾಡ ಚೌಕದಲ್ಲಿ ವಾಸಿಸುವ ಜನರು ಬಳಕೆಗೆ, ಬಟ್ಟೆ ತೊಳೆಯಲು, ಭತ್ತ ಕುದಿಸಿ, ಚುರಮರಿ ಹುರಿಯಲಿ ಇದೇ ನೀರು ಬಳಸುತ್ತಿದ್ದರು. ಈಗ ಕೆರೆ ಕಡೆಗೆ ತಿರುಗಿ ನೋಡದಂತಾಗಿದೆ. ಕೆರೆ ಬಳಿ ಹೋದರೆ ದುರ್ವಾಸನೆ ಮೂಗಿಗೆ ಅಡರುತ್ತದೆ’ ಎಂದು ಆರೋಪಿಸುತ್ತಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ