Breaking News

ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು:D.C.

Spread the love

ಬೆಳಗಾವಿ: ‘ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು. ಬದಲಿಗೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಸೂಚಿಸಿದರು.

ಇಲ್ಲಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ(ಕೆಯುಐಡಿಎಫ್‌ಸಿ) ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

 

‘ಈಗ ಪಾಲಿಕೆ ವ್ಯಾಪ್ತಿಯ 10 ವಾರ್ಡ್‌ಗಳಿಗೆ 24×7 ಮಾದರಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಯಲ್ಲಿದೆ. ಉಳಿದ ವಾರ್ಡ್‌ಗಳಿಗೆ ಯೋಜನೆ ವಿಸ್ತರಿಸುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ನೀರು ಶುದ್ಧೀಕರಣ ಘಟಕ ಹಾಗೂ ಜಲ ಸಂಗ್ರಹಾಗಾರಗಳಲ್ಲಿ ಶುಚಿತ್ವ ಕಾಪಾಡಬೇಕು’ ಎಂದು ತಾಕೀತು ಮಾಡಿದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ