ಬೆಳಗಾವಿ: ರೇಣುಕಸ್ವಾಮಿ ಕೊಲೆ ಪ್ರಕರಣ ಆರೋಪಿ, ನಟ ದರ್ಶನ್ ಸಹಚರ ಪ್ರದೂಶ್ ಅವರನ್ನು ಗುರುವಾರ ಮಧ್ಯಾಹ್ನ ಇಲ್ಲಿನ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಯಿತು.
ಪ್ರಕರಣ 14ನೇ ಆರೋಪಿ ಪ್ರದೂಶ್ ಬ್ಲ್ಯಾಂಕೆಟ್ ಹಾಗೂ ಬ್ಯಾಗ್ ಸಮೇತ ಬಂದು ಜೈಲು ಸೇರಿದರು.
ಭದ್ರತಾ ಸಿಬ್ಬಂದಿ ಅರೋಪಿಯ ಬ್ಯಾಗನ್ನು ಸಂಪೂರ್ಣ ಜಾಲಾಡಿದರು.
ಬ್ಲ್ಯಾಂಕೆಟ್ ಅನ್ನು ಒಳಗೆ ತೆಗೆದುಕೊಂಡು ಹೋಗಲು ನಿರಾಕರಿಸಿದರು.
ಬ್ಯಾಗಿನಲ್ಲಿ ಔಷಧಿ ಬಾಟಲಿ ಇದ್ದು, ವೈದ್ಯರ ಸಲಹೆ ಮೇರೆಗೆ ಕೊಡುತ್ತೇವೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.