Breaking News

ಆನ್ಲೈನ್ ಗೇಮ್, ಬೆಟ್ಟಿಂಗ್ ಆಯಪ್ ನಿಷೇಧಿಸಲು ಆಗ್ರಹ: ಅಮಿತ್ ಶಾ ಗೆ ಪತ್ರ ಬರೆದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

Spread the love

ಬೆಂಗಳೂರು: ಆನ್ಲೈನ್ ಗೇಮ್, ಬೆಟ್ಟಿಂಗ್ ಆಯಪ್ ನಿಷೇಧಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಪತ್ರ ಬರೆದಿದ್ದಾರೆ.

ಯುವಜನತೆಯನ್ನು ಹಾಳು ಮಾಡಿ ಬಡ ಕುಟುಂಬಗಳನ್ನು ಬೀದಿಗೆ ತಳ್ಳುತ್ತಿರುವ ಆನ್ಲೈನ್ ಗೇಮ್ ಮತ್ತು ಬೆಟ್ಟಿಂಗ್ ಮತ್ತಿತರ ಆಯಪ್ ಗಳನ್ನು ನಿರ್ಬಂಧಿಸಬೇಕೆಂದು ಕೋರಿದ್ದಾರೆ.

ಮಕ್ಕಳು, ಯುವಜನತೆ ಆನ್ಲೈನ್ ಬೆಟ್ಟಿಂಗ್ ಆಯಪ್ ಗಳ ವ್ಯಸನಿಗಳಾಗಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಅವರ ಮತ್ತು ಅವರ ಕುಟುಂಬದವರ ನೆಮ್ಮದಿ ಹಾಳಾಗುತ್ತಿದೆ. ಅನೇಕ ದಿಟ್ಟ ನಿರ್ಧಾರ ಕೈಗೊಂಡು ದೇಶಕ್ಕೆ, ಜನರಿಗೆ ಅನುಕೂಲ ಮಾಡಿರುವ ನೀವು ಆನ್ಲೈನ್ ಗೇಮ್, ಬೆಟ್ಟಿಂಗ್ ಆಯಪ್ ನಿರ್ಬಂಧಿಸಲು ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಮುಂದೆ ಈ ಬಗ್ಗೆ ತಮ್ಮೊಂದಿಗೆ ಚರ್ಚಿಸಲು ಬಯಸುತ್ತೇನೆ ಎಂದು ಪತ್ರ ಬರೆದಿದ್ದಾರೆ.


Spread the love

About Laxminews 24x7

Check Also

ಪಟಾಕಿ ತಾಗಿದ್ದಕ್ಕೆ ಸಿಡಿಮಿಡಿ; ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ

Spread the loveಬೆಂಗಳೂರು: ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ