Breaking News

ಮೊಬೈಲ್ ಕೊಡಲು ನಿರಾಕರಿಸಿದ್ದಕ್ಕೆ ತಲ್ವಾರ್​ನಿಂದ ಹಲ್ಲೆ..ಮುಂದೇನಾಯ್ತು?

Spread the love

ಮುಂಬೈ: ಮೊಬೈಲ್ ಕೊಡಲು ನಿರಾಕರಿಸಿದ ವ್ಯಕ್ತಿಯೋರ್ವನ ಮೇಲೆ ತಲ್ವಾರ್​ನಿಂದ ಹಲ್ಲೆ ನಡೆಸಿರುವ ಭೀಕರ ಘಟನೆ ಮುಂಬೈನ ಧಾರಾವಿಯಲ್ಲಿ ಬುಧವಾರ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆಯಲ್ಲಿ ಯುವಕರ ಗುಂಪು ಜನನಿಬಿಡ ಪ್ರದೇಶದಲ್ಲಿ ತಲ್ವಾರ್​ನಿಂದ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ.ಮೊಬೈಲ್ ಕೊಡಲು ನಿರಾಕರಿಸಿದ್ದಕ್ಕೆ ತಲ್ವಾರ್​ನಿಂದ ಹಲ್ಲೆ..ಮುಂದೇನಾಯ್ತು?

ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಮಂಗಳವಾರ ಘಟನೆ ನಡೆದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ದಾರಿಯಲ್ಲಿ ಸಾಗುತ್ತಿದ್ದ ಯುವಕನನ್ನು ತಡೆದ ಮತ್ತೊಬ್ಬ ಯುವಕ ಮೊಬೈಲ್​ ಕೊಡುವಂತೆ ಒತ್ತಾಯಿಸಿದ್ದಾನೆ. ಆಗ ಯುವಕ ಮೊಬೈಲ್​ ನೀಡಲು ನಿರಾಕರಿಸಿದ್ದು, ನಂತರ ಯುವಕನ ಮೇಲೆ ತಲ್ವಾರ್​ನಿಂದ ಹಲ್ಲೆ ನಡೆಸುತ್ತಿರುವುದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ ವೀಡಿಯೋದಲ್ಲಿ ಕಾಣಬಹುದಾಗಿದೆ. ನಂತರ ಹಲ್ಲೆ ನಡೆಸಿದ ಯುವಕನನ್ನು ನಿಯಂತ್ರಿಸಲು ಮತ್ತಿಬ್ಬರು ಯತ್ನಿಸುತ್ತಾರೆ.


Spread the love

About Laxminews 24x7

Check Also

ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆ

Spread the love ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಬೆಳಗಾವಿಯ ಗುಡಶೆಡ್ ರಸ್ತೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ