Breaking News

2028ಕ್ಕೆ ಸಿಎಂ ಆಗುವ ತಯಾರಿ ಇದೆ ನಮ್ಮದು. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು ಎಂದು ಸತೀಶ್ ಜಾರಕಿಹೊಳಿ‌

Spread the love

ಬೆಳಗಾವಿ: ಯಾವತ್ತೂ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಸ್ಥಾಪನೆ ಮಾಡಿಲ್ಲ. ಈಗಾಗಲೇ ಅನೇಕರು ಸಿಎಂ ಸ್ಥಾನ ಖಾಲಿ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಇದರಲ್ಲಿ ಗುದ್ದಾಟ, ಕುಸ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಹೇಳಿದರು.

 

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಂ.ಬಿ ಪಾಟೀಲ ಶಿವಾನಂದ ಪಾಟೀಲ, ಆರ್ ವಿ ದೇಶಪಾಂಡೆ ಸೇರಿದಂತೆ ಅನೇಕರು ಈಗಾಗಲೇ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದರು.

ಮುಂದಿನ ಸಿಎಂ ಸತೀಶ್ ಜಾರಕಿಹೊಳಿ‌ ಅಭಿಯಾನ ವಿಚಾರಕ್ಕೆ ಉತ್ತರಿಸಿದ ಅವರು, ಯಾರೋ ಒಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಕಿದರೆ ಅದು ರಾಜ್ಯದ ಅಭಿಪ್ರಾಯವಾಗದು. ಎಲ್ಲಾ ಕಡೆ ಈ ರೀತಿ ಅಭಿಯಾನ ಆರಂಭವಾಗಿದ್ದಾಗ ನಮ್ಮವರು ಹಾಕಿದ್ದಾರೆ ಎಂದರು.

ರಾಜ್ಯದಲ್ಲಿ ಈಗ ಸಿಎಂ ಬದಲಾವಣೆ ಸನ್ನಿವೇಶವಿಲ್ಲ. ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎನ್ನುವ ನಂಬಿಕೆಯಿದೆ. ಈಗ ನಾನು ಸಿಎಂ ಕನಸು ಕಂಡಿಲ್ಲ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದೇನೆ. ದೆಹಲಿಗೆ ಪದೇಪದೆ ಹೋಗುತ್ತಿರುವದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ದೆಹಲಿಗೆ ಬೇರೆ ಕೆಲಸದ ಮೇಲೆ ಹೋಗಿರುತ್ತೇವೆ ಎಂದು ಜಾರಕಿಹೊಳಿ ಹೇಳಿದರು.

2028ಕ್ಕೆ ಸಿಎಂ ಆಗುವ ತಯಾರಿ ಇದೆ ನಮ್ಮದು. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು ಎಂದು ಸತೀಶ್ ಜಾರಕಿಹೊಳಿ‌ ಮಾರ್ಮಿಕವಾಗಿ ಹೇಳಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ