Breaking News

ಎಂ.ಕೆ.ಹುಬ್ಬಳ್ಳಿ: ಕುಂಭಮೇಳದೊಂದಿಗೆ ಗಣೇಶೋತ್ಸವ ಮೆರವಣಿಗೆ

Spread the love

ಎಂ.ಕೆ.ಹುಬ್ಬಳ್ಳಿ: ಪಟ್ಟಣದಲ್ಲಿ ಶನಿವಾರ ಸಂಭ್ರಮದಿಂದ ಗಣೇಶೋತ್ಸವ ಪ್ರತಿಷ್ಠಾಪಣಾ ಮೆರವಣಿಗೆ ನಡೆಯಿತು.

ಮನೆ ಮನೆಗಳಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿದ ಪಟ್ಟಣದ ಜನರು, ಸಂಜೆ ನಡೆದ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.

 

ಪಟ್ಟಣದಲ್ಲಿ ಸುಮಾರು 20ಕ್ಕೂ ಅಧಿಕ ಸ್ಥಳಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು.

ಗಮನ ಸೆಳೆದ 50ನೇ ವರ್ಷದ ಗಣೇಶೋತ್ಸವ ಸಂಭ್ರಮ: ಪಟ್ಟಣದ ಪೇಟೆ ಓಣಿಯ ಗಣೇಶೋತ್ಸವಕ್ಕೆ 50ವರ್ಷ ತುಂಬಿದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣಿಗೆ ಗಮನ ಸೆಳೆಯಿತು. ಎತ್ತರದ ಗಣೇಶ ಮೂರ್ತಿಯ ಮುಂದೆ ಕುಂಭ ಮತ್ತು ಆರತಿ ಹಿಡಿದು ಮಹಿಳೆಯರು ಸಾಲುಗಟ್ಟಿ ಸಾಗಿದರು. ಪಾರಂಪರಿಕ ಕಲೆಗಳ ಪ್ರದರ್ಶನದ ಜೊತೆಗೆ ಜಾಝ್ ಪಥಕ ಮತ್ತು ಭಕ್ತಿಗೀತೆಗಳು ಮೊಳಗಿದವು. ಮೆರವಣಿಗೆ ಮಾರ್ಗದುದ್ದಕ್ಕೂ ಯುವಪಡೆ ಕುಣಿದು ಕುಪ್ಪಳಿಸಿತು.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ