Breaking News

ಧ್ರುವ ಮ್ಯಾನೇಜರ್ ಅಶ್ವಿನ್ ಅರೆಸ್ಟ್

Spread the love

ಬೆಂಗಳೂರು: ಜಿಮ್ ಟ್ರೇನರ್​ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನ ಆಗಿದೆ ಎನ್ನಲಾಗಿದೆ. ಬನಶಂಕರಿ ಪೊಲೀಸರು ಆರೋಪಿ ಅಶ್ವಿನ್​ನ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಮೇ.26 ರಂದು ರಾತ್ರಿ ಪ್ರಾಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು.

ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವ ಸರ್ಜಾಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿದ್ದ. ನಾಗೇಂದ್ರಗೆ ಸಾಥ್ ಕೊಟ್ಟಿದ್ದೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅನ್ನೋದು ತಿಳಿದು ಬಂದಿದೆ.ಜಿಮ್ ಟ್ರೇನರ್​ ಮೇಲಿನ ಹಲ್ಲೆ ಪ್ರಕರಣ; ಧ್ರುವ ಮ್ಯಾನೇಜರ್ ಅಶ್ವಿನ್ ಅರೆಸ್ಟ್

ಇನ್ನು ಪ್ರಶಾಂತ್ ಪೂಜಾರಿ ಅವರು ಧ್ರುವ ಸರ್ಜಾಗೆ ಆಪ್ತರಾಗಿದ್ದರು. ಧ್ರುವ ಸರ್ಜಾಗೆ ಜಿಮ್​ನಲ್ಲಿ ಟ್ರೇನ್ ಮಾಡುತ್ತಿದ್ದುದು ಇದೇ ಪ್ರಶಾಂತ್. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್​ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ. ಹೀಗಾಗಿ ಹಲ್ಲೆಗೆ ಪ್ಲ್ಯಾನ್ ರೂಪಿಸಿದರು. ತಾವೇ ಹಲ್ಲೆ ಮಾಡಿದರೆ ಗೊತ್ತಾಗುತ್ತದೆ ಎಂದು ಸ್ನೇಹಿತರ ಕೈಯಲ್ಲಿ ಹಲ್ಲೆ ಮಾಡಿಸಿದ್ದರಂತೆ. ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಅವರನ್ನು ಮುಂದಕ್ಕೆ ಬಿಟ್ಟು ಅಶ್ವಿನ್ ಹಲ್ಲೆ ಮಾಡಿಸಿದ್ದರು. ತನಿಖೆ ವೇಳೆ ಅಶ್ವಿನ್ ಪಾತ್ರ ಇರೋದು ಬೆಳಕಿಗೆ ಬಂದಿದೆ. ಈ‌ ಹಿನ್ನಲೆಯಲ್ಲಿ ಅಶ್ವಿನ್​ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ