Breaking News

ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ದಾರುಣ ಮೃತ್ಯು

Spread the love

ಚಿಕ್ಕೋಡಿ: ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಪೈಪಲೈನ್ ಹರಿ ತೆಗಿಯುವಾಗ ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಮೃತಪಟ್ಟ ಧಾರುಣ ಘಟನೆ ಸಂಭವಿಸಿದೆ.

ಪಟ್ಟಣ ಪಂಚಾಯತಿ ವತಿಯಿಂದ ಜಲಕುಂಭ ಕಾಮಗಾರಿಯನ್ನು ರಮೇಶ ಕುಕನೂರ ಎಂಬುವರ ಮನೆ ಮುಂದುಗಡೆ ರಸ್ತೆಯ ಬದಿ ಪೈಪಲೈನ್ ಹರಿ ತೆಗೆಯುವಾಗ ಮನೆಯ ಹತ್ತಿರ ಆಟ ಆಡುತ್ತಿದ್ದ 3 ವರ್ಷದ ಬಾಲಕಿ ಭೂಮಿಕಾ ರಮೇಶ ಕುಕನೂರ ಜೆಸಿಬಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಈ ಘಟನೆಯಿಂದಾಗಿ ಮೃತ ಬಾಲಕಿಯ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಚಿಕ್ಕೋಡಿಯ ಪಿಎಸ್‌ಐ ಬಸಗೌಡ ನೆರ್ಲಿ,ಎಎಸ್‌ಐ ಮಾರುತಿ ಉಗಾರೆ ಸೇರಿದಂತೆ ಸಿಬ್ಬಂದಿಗಳು ಪರಿಶೀಲಿಸಿದ್ದಾರೆ.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ