Breaking News

ದರ್ಶನ್​ ಬೆರಳ ಸನ್ನೆ ಹಿಂದಿರುವ ಸೀಕ್ರೆಟ್​ ಇದೇನಾ?; ಫ್ಯಾನ್ಸ್​ ಹೇಳ್ತಿರುವ ವಿಷಯ ಹೀಗಿದೆ ನೋಡಿ..

Spread the love

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್​ ಸೇರಿ 17 ಮಂದಿ ಆರೋಪಿಗಳು ಪ್ರಸ್ತುತ ಒಂದೊಂದು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿದ್ದ ನಟ ದರ್ಶನ್​​​ನನ್ನು ನಿಯಮ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು.

ಬಳ್ಳಾರಿ ಜೈಲಿನಲ್ಲಿ ಇರಲು ನನಗೆ ಕಷ್ಟವಾಗುತ್ತಿದೆ ಎಂದು ನಟ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ದರ್ಶನ್​ ಅವರು ಇತ್ತೀಚೆಗೆ ನಡೆದುಕೊಂಡಿರುವ ರೀತಿಗೆ ಅನೇಕರು ಆಕ್ರೋಶ ವ್ಯಕ್ತಪಡಿಸಿದರೆ ಅವರ ಫ್ಯಾನ್ಸ್​​ ಅದಕ್ಕೊಂದು ವಿಶ್ಲೇಷಣೆ ನೀಡುತ್ತಿದ್ದಾರೆ.

ಇತ್ತೀಚೆಗೆ ದರ್ಶನ್​ ಪತ್ನಿ ವಿಜಯಲಕ್ಷ್ಮಿ, ಅವರ ಸಹೋದರ ದಿನಕರ್​ ತೂಗುದೀಪ ಮತ್ತು ವಕೀಲರು ಬಳ್ಳಾರಿ ಜೈಲಿಗೆ ಹೋಗಿದ್ದರು. ಅವರ ಭೇಟಿಗೆ ಸಂಜೆ 4.15ಕ್ಕೆ ದರ್ಶನ್​ನನ್ನು ವಿಶೇಷ ಭದ್ರತಾ ಕೊಠಡಿಯಿಂದ ಜೈಲಿನ ಸಂದರ್ಶಕರ ಕೊಠಡಿಗೆ ಪೊಲೀಸರು ಕರೆ ತಂದಿದ್ದಾರೆ. ವಿಶೇಷ ಭದ್ರತಾ ಕೊಠಡಿಯಿಂದ ಸಂದರ್ಶಕರ ಕೊಠಡಿಗೆ ತೆರಳುತ್ತಿದ್ದ ವೇಳೆ ಕಾರಾಗೃಹದ ಗೇಟಿನ ಕಡೆ ನೋಡುತ್ತಾ ದರ್ಶನ್​ ತಮ್ಮ ಎರಡು ಕೈಗಳಲ್ಲಿ ಮಧ್ಯದ ಬೆರಳನ್ನು ತೋರುಸುತ್ತಾ ಸಾಗಿದ್ದಾರೆ. ನಟನ ಈ ನಡೆ ಸದ್ಯ ಭಾರೀ ಚರ್ಚೆಯಾಗುತ್ತಿದೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ