Breaking News

ಗಣೇಶ ವಿಸರ್ಜನೆಯ ಅದ್ದೂರಿ ಮೆರವಣಿಗೆ: ಈದ್‌ ರ‍್ಯಾಲಿ ಮುಂದಕ್ಕೆ

Spread the love

ಬೆಳಗಾವಿ: ಗಣೇಶ ಮೂರ್ತಿಗಳ ವಿಸರ್ಜನೆಯ ಅದ್ದೂರಿ ಮೆರವಣಿಗೆಗೆ ತೊಡಕಾಗದಿರಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯು ಸಮಸ್ಯೆ ಆಗದಿರಲಿ ಎಂಬ ಉದ್ದೇಶದಿಂದ ಸೋಮವಾರದ ಈದ್ ಮಿಲಾದ್ ಮೆರವಣಿಗೆಯನ್ನು ಮುಸ್ಲಿಮರು ಸೆಪ್ಟೆಂಬರ್ 22ಕ್ಕೆ ಮುಂದೂಡಿದರು. ಉಳಿದಂತೆ ಇತರ ಧಾರ್ಮಿಕ ಕಾರ್ಯಗಳಲ್ಲಿ ಸಂಭ್ರಮದಿಂದ ಪಾಲ್ಗೊಂಡರು.

ಬೆಳಗಾವಿ | ಗಣೇಶ ವಿಸರ್ಜನೆಯ ಅದ್ದೂರಿ ಮೆರವಣಿಗೆ: ಈದ್‌ ರ‍್ಯಾಲಿ ಮುಂದಕ್ಕೆ

‘ಬೆಳಗಾವಿಯ ಗಣೇಶೋತ್ಸವ ದೇಶದಲ್ಲೇ ಪ್ರಸಿದ್ಧ. ಮೊದಲು ಅದು ಸಂಭ್ರಮದಿಂದ ನೆರವೇರಲಿ. ಸೆಪ್ಟೆಂಬರ್ 22ರಂದು ನಾವು ಈದ್‌-ಮಿಲಾದ್‌ ಮೆರವಣಿಗೆ ಮಾಡಲು ಇಸ್ಲಾಂ ಧರ್ಮಗುರುಗಳು ಮತ್ತು ಮುಸ್ಲಿಮರೆಲ್ಲ ಸೇರಿ ನಿರ್ಧರಿಸಿದೆವು. ಗಣೇಶ ಮೂರ್ತಿಗಳ ಮೆರವಣಿಗೆಯಲ್ಲಿ ಮುಸ್ಲಿಮರೂ ಪಾಲ್ಗೊಳ್ಳುತ್ತೇವೆ. ಈದ್‌ ಮೆರವಣಿಗೆಗೆ ಹಿಂದೂಗಳನ್ನು ಆಹ್ವಾನಿಸಿದ್ದೇವೆ’ ಎಂದು ಅಂಜುಮನ್‌-ಇ-ಇಸ್ಲಾಂ ಸಂಸ್ಥೆ ಅಧ್ಯಕ್ಷರೂ ಆಗಿರುವ ಶಾಸಕ ಆಸೀಫ್‌ ಸೇಠ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮುಸ್ಲಿಮರ ಈ ನಿರ್ಣಯ ಪ್ರಶಂಸನೀಯ. ಈದ್‌-ಮಿಲಾದ್‌ ಮೆರವಣಿಗೆಯಲ್ಲಿ ನಾವೂ ಭಾಗವಹಿಸಿ, ಭಾವೈಕ್ಯತೆ ಮೆರೆಯುತ್ತೇವೆ’ ಎಂದು ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳಿ ಮುಖಂಡ ವಿಕಾಸ ಕಲಘಟಗಿ ಹೇಳಿದರು.


Spread the love

About Laxminews 24x7

Check Also

ಮುನಿರತ್ನ ಪ್ರಕರಣದ ಹಿಂದೆ ಸಿ.ಡಿ ಶಿವು ಇದ್ದಾನೆ ?: ಶಾಸಕ ರಮೇಶ ಜಾರಕಿಹೊಳಿ

Spread the love ಅಥಣಿ: ‘ಮುನಿರತ್ನ ಪ್ರಕರಣದ ಹಿಂದೆ ಸಿ.ಡಿ ಶಿವು ಇದ್ದಾನೆ. ಅವನ ವಿರೋಧಿಗಳೆಲ್ಲ ಜೈಲಿನಲ್ಲಿದ್ದಾರೆ. ಈ ಕೆಲಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ