Breaking News

ಮಹಾಲಿಂಗಪುರ | ಮಹಾಲಿಂಗೇಶ್ವರ ಜಾತ್ರೆಗೆ ಅದ್ದೂರಿ ಚಾಲನೆ

Spread the love

ಹಾಲಿಂಗಪುರ: ಪಟ್ಟಣದ ಚನ್ನಗಿರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಾರ್ವಜನಿಕ ಜಟೋತ್ಸವ ಆಯೋಜನೆಯೊಂದಿಗೆ ಪವಾಡ ಪುರುಷ ಮಹಾಲಿಂಗೇಶ್ವರ ಜಾತ್ರೆಗೆ ಅದ್ದೂರಿ ಚಾಲನೆ ನೀಡಲಾಯಿತು.

ಶಿವಭಕ್ತೆ ಸಿದ್ದಾಯಿ ತಾಯಿಗೆ ಮಹಾಲಿಂಗೇಶ್ವರರು ನೀಡಿದ ಪವಿತ್ರ ಜಡೆಯನ್ನು ಹೂವುಗಳಿಂದ ಅಲಂಕೃತವಾದ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದಿಂದ ಚನ್ನಗಿರೇಶ್ವರ ದೇವಸ್ಥಾನಕ್ಕೆ ತರಲಾಯಿತು.

ಮಹಾಲಿಂಗಪುರ | ಮಹಾಲಿಂಗೇಶ್ವರ ಜಾತ್ರೆಗೆ ಅದ್ದೂರಿ ಚಾಲನೆ

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವಕ್ಕೆ ಹಾಗೂ ಜನಪದ ಕಲಾತಂಡಗಳ ಮೆರವಣಿಗೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾಲಿಂಗೇಶ್ವರ ಜಾತ್ರಾ ಮಹೋತ್ಸವ ಸಮಿತಿ ಆಶ್ರಯದಲ್ಲಿ ಚಾಲನೆ ನೀಡಲಾಯಿತು.

ಮಿರ್ಜಿಯ ಕುದುರೆ ಕುಣಿತ, ಶಿರೋಳದ ತಾಷಾರಮ ಡೋಲು, ಗೋವನಕೊಪ್ಪದ ಗೊಂಬೆ ಕುಣಿತ, ಬಳ್ಳಾರಿಯ ಹಕ್ಕಿ-ಪಿಕ್ಕಿ ಕುಣಿತ, ತಿಕೋಟಾದ ಸತ್ತಿಗೆ ಕುಣಿತ, ಜಾಂಝ ಪತಕ್, ಸಂಬಾಳ ಮಜಲು, ಕರಡಿ ಮಜಲು ಸೇರಿದಂತೆ ವಿವಿಧ ಮಂಗಲ ವಾದ್ಯಗಳು ಮೆರವಣಿಗೆಗೆ ಕಳೆ ಕಟ್ಟಿದವು. ಕಂಡ್ಯಾಳ ಬಾಸಿಂಗ, ನಂದಿಕೋಲು, ಉಚ್ಛಾಯಿ ಬಂಡಿ ಗಮನ ಸೆಳೆದವು.

ಚನ್ನಗಿರೇಶ್ವರ ದೇವಸ್ಥಾನದಲ್ಲಿ ಮಹಾಲಿಂಗೇಶ್ವರ ಮಠದ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಪವಿತ್ರ ಗಂಧೋದಕ, ಗುಗ್ಗಳ ಧೂಮದಿಂದ ಜಡೆಯನ್ನು ತೊಳೆದು ಅಭಿಷೇಕ ಮಾಡಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ