Breaking News

ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕಾಂಗ್ರೆಸ್‌‍ ಆಗ್ರಹ

Spread the love

ಬೆಂಗಳೂರು,ಸೆ.19- ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌‍ ಕಾರ್ಯಕರ್ತರು ಹಾಗೂ ಮುಖಂಡರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುನಿರತ್ನ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.

ಮುನಿರತ್ನ ಕಾಮುಕನಾಗಿದ್ದು, ಅತ್ಯಾಚಾರಿ, ಹನಿಟ್ರ್ಯಾಪ್‌ನ ರೂವಾರಿಯಾಗಿದ್ದಾನೆ. ಗುತ್ತಿಗೆದಾರರನ್ನು ಶೋಷಣೆ ಮಾಡಿದ್ದು, ಹಣ ವಸೂಲಿ ಮಾಡಿದ್ದಾನೆ. ಗುತ್ತಿಗೆದಾರರ ಜೊತೆ ಸಂಭಾಷಣೆಯಲ್ಲಿ ಹೆಣ್ಣುಮಕ್ಕಳ ವಿಷಯವಾಗಿ, ಪರಿಶಿಷ್ಟರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾನೆ ಎಂದು ಆಕ್ರೊಶ ವ್ಯಕ್ತಪಡಿಸಿದರು.

ಜಿ.ಸಿ.ಚಂದ್ರಶೇಖರ್‌ ಮಾತನಾಡಿ, ಮುನಿರತ್ನ ಒಬ್ಬ ಗೂಂಡಾ ಶಾಸಕನಾಗಿದ್ದು, ಆತನ ಬಗ್ಗೆ ದೂರು ನೀಡಲು ಕೂಡ ಭಯ ಪಡುವ ವಾತಾವರಣವಿದೆ. ಹೀಗಾಗಿ ಬಹಳಷ್ಟು ಮಂದಿ ದೂರು ನೀಡಲು ಮುಂದೆ ಬಂದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು.

Spread the love ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು. ತಲೆ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದು ಬಿಮ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ