Breaking News

ದರ್ವೇಶ ಸಂಸ್ಥೆಯ ₹500 ಕೋಟಿಗೂ ಅಧಿಕ ವಂಚನೆ ಕೇಸ್: ಆರೋಪಿಗಳ ಜಾಮೀನು ಅರ್ಜಿ ವಜಾ

Spread the love

ರಾಯಚೂರು: ಸಾರ್ವಜನಿಕರ ₹ 500 ಕೋಟಿಗೂ ಅಧಿಕ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ವೇಶ ಸಂಸ್ಥೆಯ ಪಾಲುದಾರರು ಹಾಗೂ ಏಜೆಂಟರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ವಜಾಗೊಳಿಸಿದೆ.

ದರ್ವೇಶ ಸಂಸ್ಥೆಯ ಪಾಲುದಾರರಾದ ಮಹ್ಮದ್ ಹುಸೇನ್ ಸುಜಾ, ಸೈಯದ್ ವಾಸಿಂ, ಸೈಯದ್ ಮಿಸ್ಕಿನ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹಾಗೂ ನ್ಯಾಯಾಂಗ ಬಂಧನಲ್ಲಿರುವ ದರ್ವೇಶ ಕಂಪನಿ ಏಜೆಂಟರಾದ ಅಜರ್ ಪಾಷಾ, ಸೈಯದ್ ಮೋಸಿನ್, ಶೇಖ್ ಮುಜಾಮಿಲ್ ಮತ್ತು ಬಾಬುಲ್ ಅಲಿಯಾಸ್ ಮಹ್ಮದ್ ಶಮೀದ್ ಅಲಿ ಇವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಾರುತಿ ಬಾಗಡೆ ವಜಾಗೊಳಿಸಿದ್ದಾರೆ.

 

ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ನೇಮಕಗೊಂಡಿರುವ ಮಸ್ಕಿ ನಾಗರಾಜ ವಾದ ಮಂಡಿಸಿದ್ದರು. ರಾಯಚೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಒಡಿ ಪ್ರಕರಣದ ತನಿಖೆ ನಡೆಸಿದೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೀಪಾವಳಿ ಹಬ್ಬದ ಸಂಭ್ರಮ: ಹೊರಾಂಗಣ ಉತ್ಸವಗಳು ಆರಂಭ

Spread the love ಸುಬ್ರಹ್ಮಣ್ಯ, ದಕ್ಷಿಣಕನ್ನಡ: ದಕ್ಷಿಣ ಭಾರತದ ಪ್ರಸಿದ್ಧ ನಾಗರಾಧ್ಯ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಉತ್ಸವಗಳು ಬುಧವಾರ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ