Breaking News

ಸಂಕೇಶ್ವರ | ತರಕಾರಿ ಪೇಟೆ ಎಪಿಎಂಸಿಗೆ ಸ್ಥಳಾಂತರ: ಡಿ.ಸಿ ಆದೇಶ

Spread the love

ಸಂಕೇಶ್ವರ: ಸಂಕೇಶ್ವರದ ದುರದುಂಡೀಶ್ವರ ಮಠದ ಜಾಗದಲ್ಲಿ ನಡೆಯುತ್ತಿದ್ದ ಖಾಸಗಿ ತರಕಾರಿ ಪೇಟೆಯನ್ನು ತಕ್ಷಣವೇ ಕೃಷಿ ಉತ್ಪನ್ನ ಮಾರುಕಟ್ಟೆಗೆ (ಎ.ಪಿ.ಎಂ.ಸಿ) ಸ್ಥಳಾಂತರಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮೌಖಿಕ ಆದೇಶ ನೀಡಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗುರುವಾರ ಪ್ರತಿಭಟನೆ ನಡೆಸುತ್ತಿದ್ದ ತರಕಾರಿ ಬೆಳೆಗಾರರ ಮನವಿ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕೃಷಿ ಉತ್ಪನ ಮಾರಾಟದ ನಿಯಮಾವಳಿಗೆ ಅನುಸಾರವಾಗಿ ಖಾಸಗಿ ತರಕಾರಿ ಪೇಟೆಯನ್ನು ಎ.ಪಿ.ಎಂ.ಸಿ ಗೆ ಸ್ಥಳಾಂತರ ಮಾಡಲಾಗುವುದು ಹಾಗೂ ಇದುವರೆಗೂ ಖಾಸಗಿ ತರಕಾರಿ ಪೇಟೆಯಲ್ಲಿ ನಡೆದಿರುವ ಅಕ್ರಮವನ್ನು ತನಿಖೆ ಮಾಡಲಾಗುವುದು ಎಂದು ಹೇಳಿದರು.

ಸಂಕೇಶ್ವರ | ತರಕಾರಿ ಪೇಟೆ ಎಪಿಎಂಸಿಗೆ ಸ್ಥಳಾಂತರ: ಡಿ.ಸಿ ಆದೇಶ

ಜಿಲ್ಲಾ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಮಾತನಾಡಿ, ಕಾನೂನು ಚೌಕಟ್ಟಿನಲ್ಲಿಯೇ ಎಲ್ಲರೂ ವ್ಯವಹರಿಸಬೇಕು ಎಂದು ಹೇಳಿದರು.

ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪಾ ಪೂಜೇರಿ ಮಾತನಾಡಿ, 25 ವರ್ಷಗಳಿಂದ ಪಟ್ಟಣದಲ್ಲಿ ಖಾಸಗಿ ಜಾಗದಲ್ಲಿ ಠೋಕ ತರಕಾರಿ ಪೇಟೆ ನಡೆಯುತ್ತಿದ್ದು, ಅಲ್ಲಿನ ವರ್ತಕರು ಸರ್ಕಾರದ ಯಾವುದೇ ಲೈಸೆನ್ಸ್‌ ಹೊಂದಿಲ್ಲ. ತರಕಾರಿಗಳ ಬಹಿರಂಗ ಲಿಲಾವು ನಡೆಯುತ್ತಿಲ್ಲ. ಎಷ್ಟು ದರಕ್ಕೆ ತಮ್ಮ ತರಕಾರಿ ಮಾರಾಟವಾಗಿದೆ ಎಂಬುದೂ ರೈತರಿಗೆ ಗೊತ್ತಾಗುವುದಿಲ್ಲ. ಖಾಸಗಿ ಮಾರುಕಟ್ಟೆ ಪ್ರವೇಶಿಸುವ ಪ್ರತಿ ರೈತರಿಂದ ಶುಲ್ಕ ವಸೂಲಿ ಮಾಡಲಾಗುತ್ತಿದೆ. ವಿಕ್ರಿ ಮೊತ್ತದ ಮೇಲೆ ಶೇ10 ಕಮಿಷನ್ ರೈತರಿಂದ ಪಡೆಯಲಾಗುತ್ತಿದೆ. ಶೌಚಾಲಯ ಶುಲ್ಕ ₹10 ವಸೂಲಿ ಮಾಡಲಾಗುತ್ತಿದೆ. ಹೀಗೆ ವಿವಿಧ ಸಮಸ್ಯೆಗಳನ್ನು ತರಕಾರಿ ಬೆಳೆಗಾರರು ಎದುರಿಸುತ್ತಿದ್ದರು ಎಂದರು.

ಇದಕ್ಕೂ ಮುಂಚೆ ಹುಕ್ಕೇರಿ, ಸಂಕೇಶ್ವರ, ಗೋಕಾಕ, ಚಿಕ್ಕೋಡಿ ಭಾಗಗಳಿಂದ 150 ಟ್ರ್ಯಾಕ್ಟರ್‌ಗಳಲ್ಲಿ ಬಂದಿದ್ದ ತರಕಾರಿ ಬೆಳೆಗಾರರು ಪಟ್ಟಣದಲ್ಲಿ ಬೃಹತ್ ರ‍್ಯಾಲಿ ನಡೆಸಿ ಸಂಕೇಶ್ವರದ ಖಾಸಗಿ ತರಕಾರಿ ಪೇಟೆಯನ್ನು ಎ.ಪಿ.ಎಂ.ಸಿ ಗೆ ಸ್ಥಳಾಂತರಿಸಲು ತಹಶೀಲ್ದಾರ್‌ ಮಂಜುಳಾ ನಾಯಿಕ ಅವರಿಗೆ ಮನವಿ ಸಲ್ಲಿಸಿದರು.

 ಪೊಟೊ- 19 ಎಸಕೆವಿ 2ಇಪಿ- ಸಂಕೇಶ್ವರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿಭಟನೆ ನಡೆಸುತಿದ್ದ ತರಕಾರಿ ಬೆಳೆಗಾರರು


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ