Breaking News

ಶಿವಮೊಗ್ಗದಲ್ಲಿ ಕೊರನ್ ಮಹಾಮಾರಿಗೆ ಮೊದಲ ಬಲಿ

Spread the love

ಶಿವಮೊಗ್ಗ: ಕೊರೊನಾ ಮಹಾಮಾರಿಗೆ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದ ಮೊದಲ ಘಟನೆಯಾಗಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದ 70 ವರ್ಷದ ವೃದ್ಧೆ ಮೂಲವ್ಯಾಧಿ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗೆಂದು ಕಳೆದ ಮೂರು ದಿನದ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ಸ್ವತಃ ಅವರೇ ಆಗಮಿಸಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಆದರೆ ಈ ವೃದ್ಧೆ ಸಾವನ್ನಪ್ಪುವ ಮೊದಲೇ ಇವರಿಗೆ ಕೋವಿಡ್ 19 ತಪಾಸಣೆ ಸಹ ನಡೆಸಲಾಗಿತ್ತು.

ವೃದ್ಧೆ ಮೃತಪಟ್ಟ ನಂತರ ಕೋವಿಡ್-19 ವರದಿ ಬಂದಿದ್ದು, ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಸಚಿವ ಹೆಚ್. ಕೆ. ಪಾಟೀಲ್ ಸಿಎಂಗೆ ತನಿಖೆ ಮಾಡಿ ಅಂತ ಪತ್ರ ಬರೆಯುವುದರಲ್ಲಿ ತಪ್ಪೇನಿದೆ? ಶಿವಾನಂದ ಪಾಟೀಲ್

Spread the loveಹಾವೇರಿ : ಸಚಿವ ಹೆಚ್. ಕೆ. ಪಾಟೀಲ್ ಸಿಎಂಗೆ ತನಿಖೆ ಮಾಡಿ ಅಂತ ಪತ್ರ ಬರೆಯುವುದರಲ್ಲಿ ತಪ್ಪೇನಿದೆ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ