Breaking News

ಈಗಿನ ಸಿಎಂಗೆ ನಮ್ಮ ಭಯ ಇಲ್ಲ, ಮುಂದೆ ದೇವರು ಒಳ್ಳೆಯ ಸಿಎಂ ಕೊಟ್ಟೆ ಕೊಡ್ತಾನೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

Spread the love

ಬಾಗಲಕೋಟೆ: ಹಿಂದಿನ ಸಿಎಂ ಬೊಮ್ಮಾಯಿ ಅವರಿಗೆ ಪಂಚಮಸಾಲಿ ಸಮಾಜದ ಬಗ್ಗೆ ಗೌರವ ಮತ್ತು ಭಯ ಇತ್ತು. ಆದರೆ ಈಗಿನ ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಭಯ ಇಲ್ಲ. ಬದಲಿಗೆ ಇವರನ್ನು ಕಂಡರೆ ನಾವು ಭಯ ಪಡುವಂತಂತಾಗಿದೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸುತ್ತಿಲ್ಲ ಎಂದು ತಮ್ಮ ಅಸಮಾಧಾನ ಹೊರಹಾಕಿದರು. ಈಗಲ್ಲದಿದ್ದರೂ ಇನ್ನೂ ಐದು, ಹತ್ತು ವರ್ಷಕ್ಕಾದರೂ ರಾಜ್ಯಕ್ಕೆ ಒಬ್ಬ ಒಳ್ಳೆಯ ಮುಖ್ಯಮಂತ್ರಿಗಳನ್ನು ದೇವರು ಕೊಟ್ಟೆ ಕೊಡುತ್ತಾನೆ. ಆಗ ನಮ್ಮ ಮೀಸಲಾತಿಗೆ ಸ್ಪಂದಿಸುವ ಸಿಎಂ ಬರುತ್ತಾರೆ. ಹಾಗೆಂದು ಈಗ ನಿರಾಸೆಯಾಗಿ ಕುಳಿತರೆ ಹೋರಾಟ ನಿಂತು ಬಿಡುತ್ತದೆ ಎಂದರು.

ಹಿಂದೆ ಬಸವರಾಜ್ ಬೊಮ್ಮಾಯಿ ಸಿಎಂ ಇದ್ದಾಗ ಆವತ್ತಿನ ಪರಿಸ್ಥಿತಿ ಬೇರೆ ಇತ್ತು. ಹೀಗಾಗಿ ನಾವು ಬೊಮ್ಮಾಯಿ ಅವರನ್ನು ಎಲ್ಲಿಗೆ ಕರೆದರು ಬಂದು ಮಾತನಾಡುತ್ತಿದ್ದರು. ಈಗ ನಾನು ಸಿಎಂ ಮನೆ ಬಾಗಿಲಿಗೆ ಹೋಗುವ ಪರಿಸ್ಥಿತಿ ಬಂದಿದೆ. ಅದು ಅನಿವಾರ್ಯ, ಏನೂ ಮಾಡೋಕೆ ಬರುವುದಿಲ್ಲ. ನಾವು ಹೋರಾಟದಲ್ಲಿ ಇರುವುದರಿಂದ ಎಷ್ಟೇ ಕಷ್ಟ ಆದರೂ ಹೋರಾಟ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ