ಬಾಗಲಕೋಟೆ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಿನ್ನೆ ಮುಧೋಳ ಪಟ್ಟಣದ ಜನ್ನತ್ ನಗರದ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟಿಪ್ಪು ಸುಲ್ತಾನ್, ಔರಂಗಾಜೇಬ್ ಕುರಿತಂತೆ ಅಶ್ಲೀಲ ಪದ ಬಳಕೆ ಮಾಡಿ, ಪ್ರಚೋದನಕಾರಿ ಭಾಷಣ ಮಾಡಿದ್ದರು.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಈಗ ಪ್ರಚೋದನಕಾರಿ ಭಾಷಣೆ ಮಾಡಿದ್ದಂತ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
Laxmi News 24×7