Breaking News

ಬಿಜೆಪಿಯಿಂದ ದೇಶದಾದ್ಯಂತ ದ್ವೇಷ ರಾಜಕಾರಣ: ವಿನಯ ಕುಲಕರ್ಣಿ

Spread the love

ಬೆಳಗಾವಿ: ‘ಬಿಜೆಪಿಯವರಂತೆ ನಾವ್ಯಾರೂ ದ್ವೇಷ ರಾಜಕಾರಣ ಮಾಡಿಲ್ಲ. ಅವರು ಎಷ್ಟು ಜನರಿಗೆ, ಎಷ್ಟು ಹಿಂಸೆ ಕೊಟ್ಟಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಇದಕ್ಕೆ ನಾನೇ ದೊಡ್ಡ ಸಾಕ್ಷಿ’ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು.

‘ಕಾಂಗ್ರೆಸ್‌ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂಬ ಸಂಸದ ಜಗದೀಶ ಶೆಟ್ಟರ್‌ ಹೇಳಿಕೆ‌ಗೆ, ಪ್ರತಿಕ್ರಿಯಿಸಿದ ಅವರು, ‘ಇಡೀ ದೇಶದಲ್ಲಿ ವಿರೋಧ ಪಕ್ಷದವರ ವಿರುದ್ಧ ಬಿಜೆಪಿಯವರು ದ್ವೇಷದ ರಾಜಕಾರಣ ನಡೆಸಿದ್ದಾರೆ.

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕನಾದರೂ ನಾಲ್ಕು ವರ್ಷಗಳಿಂದ ನನ್ನೂರು ಮತ್ತು ಕ್ಷೇತ್ರಕ್ಕೆ ಹೋಗಿಲ್ಲ. ಯಾವುದೇ ಕೆಲಸಕ್ಕಾಗಿ ಕ್ಷೇತ್ರದ ಜನ ಬೆಳಗಾವಿಗೆ ಬಂದು ನಿಲ್ಲುವ ಪರಿಸ್ಥಿತಿ ಇದೆ. ಇದು ದ್ವೇಷ ರಾಜಕಾರಣದ ಫಲ’ ಎಂದರು.

‘ಶಾಸಕ ಮುನಿರತ್ನ ಅವರ ವಿಚಾರದಲ್ಲಿ ನಾವೇನು ದ್ವೇಷದ ರಾಜಕಾರಣ ಮಾಡಿದ್ದೇವೆ. ಅವರು ಸ್ವತಃ ಕೀಳಾಗಿ ಮಾತನಾಡಿ, ಈ ಪರಿಸ್ಥಿತಿ ಅನುಭವಿಸುತ್ತಿದ್ದಾರೆ. ಅವರು ಮಾಡಿದ್ದು ತಪ್ಪು’ ಎಂದು ತಿಳಿಸಿದರು.

ಮುನಿರತ್ನ ವಿರುದ್ಧ ಎಚ್‌ಐವಿ ಚುಚ್ಚುಮದ್ದಿನ ಆರೋಪ ಕೇಳಿಬಂದಿರುವ ಕುರಿತು ಪ್ರತಿಕ್ರಿಯಿಸಿದ ವಿನಯ, ‘‌ಈಗ ರಾಜಕೀಯ ವ್ಯವಸ್ಥೆ ಸಂಪೂರ್ಣ ವ್ಯಾಪಾರ ಆಗಿದೆ. ರಾಜಕಾರಣಿಗಳ ಜತೆಗೆ, ಜನರೂ ವ್ಯಾಪಾರಿ ಭಾವ ಬೆಳೆಸಿಕೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಮರ್ಯಾದೆಗೆ ಹೆದರಿ, ಜನರು ಬದುಕುತ್ತಾರೆ. ಆದರೆ, ಬೆಂಗಳೂರಿನಂಥ ಮಹಾನಗರಗಳಲ್ಲಿ ಯಾರು ಏನು ಮಾಡುತ್ತಿದ್ದಾರೆ ಎಂಬುದೇ ಗೊತ್ತಾಗುವುದಿಲ್ಲ. ಒಳ್ಳೆಯವರು ಮತ್ತು ಕೆಟ್ಟವರು ಯಾರು ಎಂಬುದನ್ನು ನೋಡಿ, ಜನ ಆಯ್ಕೆ ಮಾಡಬೇಕು’ ಎಂದರು.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ