Breaking News

ಕೆಲವೇ ದಿನಗಳಲ್ಲಿ ಬಸ್‌ ಸಂಚಾರ ನಿಲ್ಲಿಸಿ, ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಲಿದ್ದಾರೆ ?

Spread the love

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ವಿವಿಧ ಸಾರಿಗೆ ನಿಗಮಗಳು ರಾಜ್ಯಾದ್ಯಂತ ಜನರಿಗೆ ಪ್ರಯಾಣ ಸೇವೆ ಕಲ್ಪಿಸುತ್ತಿವೆ. ಒಂದು ದಿನ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾದರೂ ಪ್ರಯಾಣಿಕರ ಪರದಾಟ ನೋಡಲಾಗುವುದಿಲ್ಲ. ಆದರೆ, ಸಾರಿಗೆ ನೌಕಕರು ಇನ್ನೇನು ಕೆಲವೇ ದಿನಗಳಲ್ಲಿ ಬಸ್‌ ಸಂಚಾರ ನಿಲ್ಲಿಸಿ, ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಲಿದ್ದಾರೆ ಎಂದು ವರದಿಯಾಗಿದೆ.

 

ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ವಿವಿಧ ಸಾರಿಗೆ ನೌಕರರ ಸಂಘಟನೆಗಳು ಜೊತೆಗೂಡಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದಾರಂತೆ. ಹಾಗಾಗಿ ಕೆಎಸ್​ಆರ್​ಟಿಸಿ, ಬಿಎಂಟಿಸಿ ಹಾಗೂ ನಾಲ್ಕೂ ನಿಗಮಗಳ ಸಾರಿಗೆ ಸಿಬ್ಬಂದಿ ಪ್ರಯಾಣಿಕರಿಗೆ ಶಾಕ್‌ ಕೊಡಲು ತೀರ್ಮಾನಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ತಮ್ಮ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಈಗಾಗಲೇ ಇದೇ 26ರವರೆಗೆ (ನಾಳೆ) ಡೆಡ್‌ಲೈನ್‌ ಕೂಡ ನೀಡಿದ್ದಾರೆ. ಅಷ್ಟರೊಳಗೆ ಸರ್ಕಾರ ಸಾರಿಗೆ ಸಿಬ್ಬಂದಿಯ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಷ್ಕರದ ದಿನಾಂಕ ಘೋಷಣೆ ಮಾಡುವುದಾಗಿ ವಾರ್ನಿಂಗ್‌ ಕೂಡ ಕೊಟ್ಟಿದ್ದಾರೆ. ಈ ಸಂಬಂಧ ಸೆಪ್ಟೆಂಬರ್‌ 27ರಂದು ಸಭೆ ನಡೆಸಿ ಮುಷ್ಕರದ ದಿನಾಂಕ ಘೋಷಿಸಲಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ