Breaking News

ಜನ ತಿಳಿದಷ್ಟು ಸಿದ್ದರಾಮಯ್ಯ ಪರಿಶುದ್ಧರೇನಲ್ಲ:ಸಿಟಿ ರವಿ

Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನ ಹೇಳಿಕೊಂಡಷ್ಟು ಪರಿಶುದ್ಧವೇನಲ್ಲ. ತಮ್ಮ ಭ್ರಷ್ಟಾಚಾರ ಹೊರಗೆ ಬರಬಾರದು ಎಂದು ಪೂರ್ವ ತಯಾರಿ ಮಾಡಿಕೊಂಡು ಭ್ರಷ್ಟಾಚಾರ ಮಾಡುವವರು ಎಂದು ಬಿಜೆಪಿ ನಾಯಕ ಸಿಟಿ ರವಿ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

 

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆ ತಿಳಿದಷ್ಟು ಸಿದ್ದರಾಮಯ್ಯ ಪರಿಶುದ್ಧರೇನಲ್ಲ. ಅವರ ಮೇಲೆ 65 ಕ್ಕೂ ಹೆಚ್ಚು ಭ್ರಷ್ಟಾಚಾರ ದ ಆರೋಪಗಳಿವೆ. ತನಿಖೆ ಆಗದಂತೆ ಮುನ್ನೆಚ್ಚರಿಕೆವಹಿಸಿ ಅವರಿಗೆ ಅವರೇ ಪ್ರಾಮಾಣಿಕರೆಂದು ಹೇಳಿಕೊಳ್ತಾ ಇದ್ದಾರೆ. ಈಗ ಈ ಪ್ರಕರಣದಲ್ಲಿ ಸಿಬಿಐ ತನಿಖೆ ಆಗದಂತೆ ಅಧಿಕಾರವನ್ನು ಮೊಟಕುಗೊಳಿಸಿರುವುದರ ಹಿಂದೆ ಇದೇ ದುರುದ್ದೇವಿದೆ. ಇಲ್ಲದಿದ್ರೆ ಅವರಿಗೆ ಸಿಬಿಐ ತನಿಖೆ ಬಗ್ಗೆ ಭಯ ಯಾಕೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ನಿಜವಾಗಲೂ ಪ್ರಾಮಾಣಿಕರಾಗಿದ್ದಾರೆ. ಮೈಮೇಲೆ ಕಪ್ಪು ಚುಕ್ಕೆ ಇಲ್ಲದಿದ್ರೆ, ಭ್ರಷ್ಟಾಚಾರ ರಹಿತ ರಾಜಕಾರಣ ಮಾಡಿದ್ದರೆ ಯಾವ ತನಿಖೆಗೂ ಹೆದರಬೇಕಿಲ್ಲ. ಎಷ್ಟೇ ಶುದ್ಧಹಸ್ತರೆಂದು ಹೇಳಿಕೊಂಡರೂ ಕಾಂಗ್ರೆಸ್ ಪರಮಭ್ರಷ್ಟ ಸರ್ಕಾರವಾಗಿದೆ. ರಾಜ್ಯಪಾಲರ ಪತ್ರಕ್ಕೆ ಸಂಪುಟದ ನಿರ್ಣಯದ ಬಳಿಕವೇ ಉತ್ತರ ಕೊಡಬೇಕು ಎಂಬ ಹಾಸ್ಯಾಸ್ಪದ ನಿರ್ಧಾರ ಕೂಡಾ ತೆಗೆದುಕೊಂಡಿದ್ದೀರಿ. ರಾಜ್ಯಪಾಲರ ಪತ್ರಕ್ಕೂ ಉತ್ತರ ನೀಡುವ ಅಧಿಕಾರವೂ ಮುಖ್ಯ ಕಾರ್ಯದರ್ಶಿಗೆ ಇಲ್ಲವಾ? ಪಾರದರ್ಶಕತೆ ಪ್ರಜಾಪ್ರಭುತ್ವದ ಭಾಗ ಆಗಬೇಕು. ರಾಜ್ಯಪಾಲರ ಪತ್ರಕ್ಕೆ ಉತ್ತರ ಕೊಡಲೇಬಾರದು ಎಂಬ ನಿಲುವು ಪ್ರಜಾಪ್ರಭುತ್ವ ದ ಆಶಯಕ್ಕೆ ವಿರುದ್ದವಾಗಿದೆ. ಅವಕಾಶ ಇದ್ದಿದ್ದರೆ ಲೋಕಾಯುಕ್ತಕ್ಕೂ ಭೀಗ ಹಾಕ್ತಾ ಇದ್ರೋ ಏನೋ.? ಎಂದು ಹರಿಹಾಯ್ದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ