Breaking News

ಸಿದ್ದರಾಮಯ್ಯ ನೈತಿಕತೆ ಈಗ ಎಲ್ಲಿಗೆ ಹೋಗಿದೆ?: ಶಾಸಕ ಅಭಯ ಪಾಟೀಲ

Spread the love

ಬೆಳಗಾವಿ: ‘ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಆರೋಪ ಕೇಳಿಬಂದಾಗ, ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದರು. ಈಗ ಅವರ ನೈತಿಕತೆ ಎಲ್ಲಿಗೆ ಹೋಗಿದೆ’ ಎಂದು ಶಾಸಕ ಅಭಯ ಪಾಟೀಲ ಪ್ರಶ್ನಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾದರೂ ಸಿದ್ದರಾಮಯ್ಯ ರಾಜೀನಾಮೆ ಕೊಡದ ವಿಚಾರವಾಗಿ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು.

 

‘ರಾಜ್ಯದಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳದೆ ಕೆಲಸ ಮಾಡಿದ ಕೆಲವೇ ರಾಜಕಾರಣಿಗಳ ಪೈಕಿ ಸಿದ್ದರಾಮಯ್ಯ ಕೂಡ ಒಬ್ಬರು. ಅವರ ಬಗ್ಗೆ ನಿಜವಾಗಿಯೂ ಬಹಳ ಗೌರವವಿತ್ತು. ಆದರೆ, ಈಗ ಕುರ್ಚಿಗೆ ಫೆವಿಕಾಲ್‌ ಹಚ್ಚಿಕೊಂಡು ಕುಳಿತಿದ್ದಾರೆ. ಯಡಿಯೂರಪ್ಪ ಅವರಿಗೊಂದು ಕಾಯ್ದೆ ಮತ್ತು ನಿಮಗೊಂದು ಕಾಯ್ದೆಯೇ?’ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ