Breaking News

ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ

Spread the love

ಮೈಸೂರು,ಅ.2- ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು.

ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ

ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು, ರಾಜಕಾರಣಿಗಳು ಉಪಸ್ಥಿತರಿರಲಿದ್ದಾರೆ.

ಅದೇ ದಿನ ಸಂಜೆ 6ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು, ಸಂಗೀತ ವಿದ್ವಾನ್‌ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಪ್ರಧಾನ ಉದ್ಘಾಟನಾ ಸಮಾರಂಭದ ನಂತರ ಚಲನಚಿತೋತ್ಸವ, ಆಹಾರಮೇಳ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು.ಅ.12ರಂದು ವಿಜಯದಶಮಿ ಕಾರ್ಯಕ್ರಮ ನಡೆಯಲಿದ್ದು, ಆ ದಿನ ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂ ಸವಾರಿ ನಡೆಯಲಿದೆ.


Spread the love

About Laxminews 24x7

Check Also

ಭಗವದ್ಗೀತೆ ಜೀವನಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ : ವಿನೋದ ದೇಶಪಾಂಡೆ

Spread the love ಬೆಳಗಾವಿ : ಭಗವದ್ಗೀತೆ ಪ್ರತಿಯೊಬ್ಬರ ಜೀವನಕ್ಕೆ, ಇಡೀ ಮಾನವ ಕುಲಕ್ಕೆ ಮಾರ್ಗದರ್ಶನ ಮಾಡುವ ಗ್ರಂಥ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ