Breaking News

ಭಾರತದೆಡೆ ಹೆಚ್ಚಿದ ವಿಶ್ವದ ನಿರೀಕ್ಷೆ: ಗಡ್ಕರಿ

Spread the love

ನಿಪ್ಪಾಣಿ: ‘ತಾಂತ್ರಿಕ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಪ್ರತಿಭಾವಂತ ಮಾನವಶಕ್ತಿ ಕೇವಲ ಭಾರತದಲ್ಲಿ ಮಾತ್ರ ಇರುವುದರಿಂದ ಇಡಿ ವಿಶ್ವವು ಭಾರತವನ್ನು ಬಹು ನಿರೀಕ್ಷೆಯಿಂದ ಗಮನಿಸುತ್ತಿದೆ. ಇಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ತಯಾರಿಸುವ ಕಾರ್ಯ ಕೆ.ಎಲ್.ಇ.ಯಂತಹ ಶಿಕ್ಷಣ ಸಂಸ್ಥೆಗಳು ಈ ಭಾಗದಲ್ಲಿ ಮಾಡುತ್ತಿವೆ’ ಎಂದು ಕೇಂದ್ರ ರಸ್ತೆ, ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತೀನ ಗಡ್ಕರಿ ಹೇಳಿದರು.

 

ನಿಪ್ಪಾಣಿಯ ವಿಎಸ್‍ಎಂ ಸೋಮಶೇಖರ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಡಾ. ಪ್ರಭಾಕರ ಕೋರೆ ನಾಗರಿಕ ಗೌರವ ಸತ್ಕಾರ ಮತ್ತು ಎಂಬಿಎ-ಎಂಸಿಎ ಮಹಾವಿದ್ಯಾಲಯದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘₹ 22 ಲಕ್ಷ ಕೋಟಿ ಮೌಲ್ಯದ ಪೆಟ್ರೋಲ್, ಡೀಸಲ್‌ ಮತ್ತು ಗ್ಯಾಸ್ ಆಮದು ಮಾಡಿಕೊಳ್ಳುತ್ತೇವೆ. ಇದರಲ್ಲಿ ₹ 10 ಲಕ್ಷ ಕೋಟಿ ಇಥೆನಾಲ್ ಮೂಲಕ ಉಳಿಸಿದಲ್ಲಿ ದೇಶದ ಪ್ರತಿಯೊಬ್ಬ ರೈತ ಸಮೃದ್ಧರಾಗುತ್ತಾರೆ. ಸ್ಮಾರ್ಟ್ ಸಿಟಿಯೊಂದಿಗೆ ಸ್ಮಾರ್ಟ್ ಹಳ್ಳಿಗಳಾಗಲು ಸಮಯ ತಗಲುವುದಿಲ್ಲ. ಇಥೆನಾಲ್ ಉತ್ಪಾದನೆಯಿಂದ ಆರ್ಥಿಕ ಪ್ರಗತಿ ಸಾಧಿಸಲು ಸಾಧ್ಯ’ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ