Breaking News

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Central Jail) ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ

Spread the love

ಬೆಳಗಾವಿ: ಹಳೆ‌ ದ್ವೇಷ ಹಿನ್ನೆಲೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ (Hindalga Central Jail) ಕೈದಿಯೋರ್ವನ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ರಾಮತೀರ್ಥ ನಗರ ನಿವಾಸಿ ನಿತೇಶಕುಮಾರ ಚವ್ಹಾಣ ಎಂಬ ವಿಚಾರಣಾಧೀನ ಕೈದಿ ಮೇಲೆ ಹಳೆ ದ್ವೇಷದಿಂದಾಗಿ ಶುಕ್ರವಾರ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ನಿತೇಶ್ ಕುಮಾರ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುತ್ತ್ಯಾನಟ್ಟಿಯ ವಿಚಾರಣಾದೀನ ಕೈದಿಗಳಾದ ಬಸವರಾಜ ಹೊಳೆಪ್ಪ‌ ದಡ್ಡಿ, ಬಸವಣ್ಣಿ ಸಿದ್ದಪ್ಪ ನಾಯಿಕ, ಸವೆನಾ ಸಿದ್ದಪ್ಪ ದಡ್ಡಿ ಹಾಗೂ ಪ್ರಧಾನಿ ಶೇಖರ ವಾಘಮೋಡೆ ಎಂಬಾತರು ಹಲ್ಲೆ ಮಾಡಿದ್ದಾರೆ.

ಆರೋಪಿಗಳ ಸಂಬಂಧಿಕನ ಮೇಲೆ ಹಲ್ಲೆ ಮಾಡಿದ್ದ ಎಂಬ ಕಾರಣಕ್ಕೆ ಎಲ್ಲರೂ ಸೇರಿ ಈತನ ಮೇಲೆ ಹಲ್ಲೆ‌ ನಡೆಸಿದ್ದಾರೆ ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ