Breaking News

ಮುರುಡೇಶ್ವರ ಬೀಚ್‌ಗೆ ನಿರ್ಬಂಧ: ಪ್ರವಾಸಿಗರಿಗೆ ನಿರಾಶೆ

Spread the love

ಟ್ಕಳ: ಬೆಂಗಳೂರು ಮೂಲದ ವಿದ್ಯಾರ್ಥಿ ಭಾನುವಾರ ಮುರುಡೇಶ್ವರದ ಕಡಲಿನಲ್ಲಿ ಈಜಲು ತೆರಳಿ ಮೃತಪಟ್ಟ ಹಿನ್ನೆಲೆಯಲಿ ಭಟ್ಕಳ ಉಪವಿಭಾಗಾಧಿಕಾರಿ ಆದೇಶದಂತೆ ಸೋಮವಾರದಿಂದ ಪ್ರವಾಸಿಗರಿಗೆ ಮುರುಡೇಶ್ವರ ಬೀಚ್ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಅಕ್ಟೋಬರ್‌ ರಜೆ ಕಳೆಯಲು ಬರುವ ಪ್ರವಾಸಿಗರು ಬೀಚ್‌ಗೆ ತೆರಳದಂತಾಗಿದೆ.

ಮುರುಡೇಶ್ವರ ಬೀಚ್‌ಗೆ ನಿರ್ಬಂಧ: ಪ್ರವಾಸಿಗರಿಗೆ ನಿರಾಶೆ

ಸಾಲು ಸಾಲು ರಜೆಯ ಸಂದರ್ಭದಲ್ಲಿ ಮುರುಡೇಶ್ವರಕ್ಕೆ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ. ಅವರ ಸುರಕ್ಷತೆಗಾಗಿ ಪ್ರವಾಸೋದ್ಯಮ ಇಲಾಖೆಯೂ ಅಗತ್ಯ ಜೀವ ರಕ್ಷಕ ಸಿಬ್ಬಂದಿ ಹಾಗೂ ಸಾಧನ ಪೂರೈಸುವ ತನಕ ಬೀಚ್ ಪ್ರವೇಶಕ್ಕೆ ನಿರ್ಬಂಧ ವಿಧಿಸುವಂತೆ ಜಿಲ್ಲಾಧಿಕಾರಿಯ ಮೌಖಿಕ ಆದೇಶ ಉಲ್ಲೇಖಿಸಿ, ಭಟ್ಕಳ ಉಪವಿಭಾಗಾಧಿಕಾರಿ ನಯನಾ ಅವರು ಭಟ್ಕಳ ಡಿವೈಎಸ್ಪಿಗೆ ಸೋಮವಾರ ಪತ್ರ ಬರೆದು ಬೀಚ್ ಪ್ರವೇಶಕ್ಕೆ ನಿರ್ಭಂದ ವಿಧಿಸುವಂತೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ

Spread the loveಹಾವೇರಿ: ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ