Breaking News

ಬಿಡುಗಡೆಯಾಗದ ಗೌರವ ಧನ. ಆಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

Spread the love

ದಾವಣಗೆರೆ: ಕಳೆದ ಮೂರು ತಿಂಗಳನಿಂದ ಗೌರವ ಧನ ಬಿಡುಗಡೆಯಾಗದೆ ಜೀವನ ನಿರ್ವಹಣೆಗೆ ತೊಂದರೆಯಿಂದ ಬೇಸತ್ತ ಅಂಗನವಾಡಿ ಸಹಾಯಕಿಯೊಬ್ಬರು ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆಯ ಡಾಂಗೇ ಪಾರ್ಕಿನ ಅಂಗನವಾಡಿ ಕೇಂದ್ರದ ಸಹಾಯಕಿ ಭಾರತಿ ಆತ್ಮಹತ್ಯೆಗೆ ಯತ್ನಿಸಿದವರು.

ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ, ಇತರೆಡೆ ಕರೆದೊಯ್ಯಲು ಹಣಕಾಸಿನ ತೊಂದರೆಯಿಂದ ಕುಟುಂಬದವರು ಪರಿತಪಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಕಳೆದ ಮೂರು ತಿಂಗಳನಿಂದ ಗೌರವ ಧನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಭಾರತಿ ಅವರು ಕುಟುಂಬ ನಿರ್ವಹಣೆಗೆ ಕೆಲವು ಕಡೆ ಸಾಲ ಮಾಡಿದ್ದರು. ಗೌರವ ಧನ ಬಂದಲ್ಲಿ ಸಾಲ ತೀರುವಳಿ ಮಾಡುವ ಯೋಜನೆ ಇತ್ತು. ಆದರೆ, ಗೌರವ ಧನ ಬಿಡುಗಡೆ ಆಗಿರಲಿಲ್ಲ. ಒಂದು ಕಡೆ ಜೀವನ ನಿರ್ವಹಣೆಯ ಸಮಸ್ಯೆ ಮತ್ತೊಂದು ಕಡೆ ಸಾಲ ತೀರುವಳಿಗೆ ಒತ್ತಡದಿಂದ ಮನನೊಂದು ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.


Spread the love

About Laxminews 24x7

Check Also

ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಕೆ.ಜೆ. ಜಾರ್ಜ್

Spread the loveಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಾದ್ಯಂತ ಶೋಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ