Breaking News

ಗಣಿಗಾರಿಕೆ ಅಕ್ರಮಗಳ ತನಿಖೆಯ ಎಸ್​ಐಟಿ ಕಾರ್ಯಾವಧಿ ವಿಸ್ತರಿಸಿದ ರಾಜ್ಯ ಸರ್ಕಾರ

Spread the love

ಬೆಂಗಳೂರು, ಅಕ್ಟೋಬರ್​ 10: ಗಣಿಗಾರಿಕೆ ಅಕ್ರಮಗಳ ಕುರಿತ ತನಿಖೆಯ ಎಸ್‌ಐಟಿ ಕಾರ್ಯಾವಧಿಯನ್ನು ಜುಲೈ 1ರಿಂದ ಒಂದು ವರ್ಷ ವಿಸ್ತರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ(Siddaramaiah)ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌​ಕೆ ಪಾಟೀಲ್​, ಗಣಿಗಾರಿಕೆ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.

ಇದೀಗ ಅದರ ಅವಧಿ ಮುಕ್ತಾಯವಾಗಿದ್ದು, ಇನ್ನೂ ಒಂದು ವರ್ಷದವರೆಗೆ ಅಧಿಕಾರಾವಧಿಯನ್ನು ವಿಸ್ತರಿಸಲು ಇಂದಿನ ಸಂಪುಟ ಸಭೆ ಅಸ್ತು ಎಂದಿದೆ. 113 ಗಣಿ ಪ್ರಕರಣಗಳು ಬಾಕಿ ಇವೆ. ಎರಡು ಪ್ರಕರಣಗಳು ಹೈಕೋರ್ಟ್​ನಲ್ಲಿವೆ. ಎಂಟು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ