Breaking News

ದಸರಾ ವೇಳೆಯೇ ಮೈಸೂರು ರಾಜಮನೆತನಕ್ಕೆ ಮತ್ತೊಂದು ಕುಡಿ, ದುಪ್ಪಟ್ಟಾಯ್ತು ಸಂಭ್ರಮ

Spread the love

ಮೈಸೂರು ರಾಜವಂಶಸ್ಥರಾದ ಒಡೆಯರ್‌ ಅವರಿಂದಾಗಿ ದಸರಾ ಜಗದ್ವಿಖ್ಯಾತಿಯಾಗಿದೆ. ಹಬ್ಬದ ಸಮಯದಲ್ಲೇ ಯುವರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ಪತ್ನಿ ತ್ರಿಷಿಕಾ ದಂಪತಿ ಅವರು ಎರಡನೇ ಮಗುವನ್ನು ಬರಮಾಡಿಕೊಂಡಿದ್ದಾರೆ. ಸದ್ಯ ದಸರಾ ಹೊತ್ತಲ್ಲೇ ಒಡೆಯರ್‌ ಕುಟುಂಬದಲ್ಲಿ ಡಬಲ್‌ ಧಮಾಕಾದ ಸಂಭ್ರಮ ಮನೆಮಾಡಿದೆ.

 

ಯದುವೀರ್ ಹಾಗೂ ಪತ್ನಿ ರಾಣಿ ತ್ರಿಷಿಕಾ ಕುಮಾರಿ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರೂ ಕ್ಷೇಮವಾಗಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರು ದಸರಾ ಆಚರಣೆಯಲ್ಲಿದ್ದ ರಾಜರ ಕುಟುಂಬವು ಸದ್ಯ ಎರಡೆರಡು ಹಬ್ಬದ ಸಂಭ್ರಮದಲ್ಲಿದೆ.


Spread the love

About Laxminews 24x7

Check Also

ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ.

Spread the love ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲಾರ, ಚನ್ನಪಟ್ಟಣ ಬೃಹತ್​​ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ