Breaking News

ಮುಹೂರ್ತ ಮೀರಿ ಪುಷ್ಪಾರ್ಚನೆ: ಸರ್ಕಾರ-ರಾಜಮನೆತನದ ನಡುವೆ ತಿಕ್ಕಾಟ

Spread the love

ಮೈಸೂರು: ವಿಜಯದಶಮಿ ಮೆರವಣಿಗೆಯಲ್ಲಿ ಅಂಬಾರಿಗೆ ಪುಷ್ಪಾರ್ಚನೆಯು ಮುಹೂರ್ತ ಮೀರಿದ ಬಳಿಕ ಅಂದರೆ ಅರ್ಧ ತಾಸು ತಡವಾಗಿ ನಡೆದಿದ್ದಕ್ಕೆ ಅಂಬಾರಿಯನ್ನು ಸಿದ್ಧಪಡಿಸುವಲ್ಲಿ ಆದ ವಿಳಂಬವೇ ಕಾರಣ ಎಂದು ಹೇಳಲಾಗುತ್ತಿದೆ.

ಮುಹೂರ್ತದ ಪ್ರಕಾರ, 4ರಿಂದ 4.30ರೊಳಗೆ ವಿಜಯದಶಮಿ ಮೆರವಣಿಗೆಯನ್ನು ಮುಖ್ಯಮಂತ್ರಿ ಉದ್ಘಾಟಿಸಬೇಕಿತ್ತು.

ಆದರೆ, ಅದು ನಡೆದಾಗ 5 ಗಂಟೆ 2 ನಿಮಿಷ ಆಗಿತ್ತು. ಇದಕ್ಕೆ, ರಾಜವಂಶಸ್ಥರಿಂದ ಅಂಬಾರಿಯು ವಿಳಂಬವಾಗಿ ದೊರೆತಿದ್ದು ಕಾರಣ ಎಂದು ಹೇಳಲಾಗುತ್ತಿದೆ.

ಅಂಬಾರಿಯು ರಾಜವಂಶಸ್ಥರ ಸುಪರ್ದಿಯಲ್ಲಿರುತ್ತದೆ. ಅದನ್ನು ಸಾಮಾನ್ಯವಾಗಿ ವಿಜಯದಶಮಿ ಮೆರವಣಿಗೆಯ ಮುಹೂರ್ತಕ್ಕೆ ಒಂದು ತಾಸು ಮುಂಚಿತವಾಗಿ ಕೊಡಲಾಗುತ್ತದೆ. ಆದರೆ, ಈ ಬಾರಿ ತಡವಾಯಿತು. ಸರ್ಕಾರ ಹಾಗೂ ಅರಮನೆಯ ನಡುವಿನ ಜಟಾಪಟಿಯೇ ಇದಕ್ಕೆ ಕಾರಣ ಎನ್ನಲಾಗತ್ತಿದೆ.

ಅಂಬಾರಿ ದೊರೆಯುವುದು ವಿಳಂಬವಾದ ವಿಷಯ ತಿಳಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಹಾಗೂ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್‌ ವೇದಿಕೆ ಬಳಿಯಿಂದ ಅಂಬಾರಿ ಕಟ್ಟುವ ಸ್ಥಳಕ್ಕೆ ತೆರಳಿದ್ದರು.

ತಡವಾದ್ದರಿಂದ, ತರಾತುರಿಯಲ್ಲಿ ಅಂಬಾರಿಯನ್ನು ಕಟ್ಟಲಾಯಿತು ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ