ಬೆಂಗಳೂರು, ಅ.14- ನಗರದಲ್ಲಿ 30 ವರ್ಷಗಳ ಅವಧಿಗೆ ಕಸದ ಟೆಂಡರ್ ಕರೆಯಲು ಸರ್ಕಾರ ಅನುಮೋದನೆ ನೀಡಿದೆ ಎಂದು ಬಿ ಬಿ ಎಂ ಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. 30 ವರ್ಷಗಳ ಅವಧಿಗೆ ಕಸದ ಟೆಂಡರ್ ಕರೆಯುವ ಸವಿಸ್ತಾರವಾದ ಡ್ರಾಪ್ಟ್ ಅನ್ನು ನಾವು ಸರ್ಕಾರಕ್ಕೆ ಕಳುಹಿಸಿದ್ದೇವು.
ಇದೀಗ ನಮ್ಮ ಕರಡಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವುದರಿಂದ ಅದಷ್ಟು ಶೀಘ್ರ ಟೆಂಡರ್ ಕರೆಯಲಾಗುವುದು ಎಂದು ಅವರು ಮಾಹಿತಿ ನೀಡಿದರು.
30 ವರ್ಷಗಳ ಕಸದ ಟೆಂಡರ್ ನೀಡಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದರು ಸರ್ಕಾರ ಕೇವಲ ಐದೇ ತಿಂಗಳಲ್ಲಿ ಯೋಜನೆಗೆ ಒಪ್ಪಿಗೆ ನೀಡಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
Laxmi News 24×7