Breaking News

ಉದ್ಯೋಗ ಖಾತರಿ ರಥಕ್ಕೆ ಚಾಲನೆ

Spread the love

ಹುಕ್ಕೇರಿ: ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸಲು ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ತಾಲ್ಲೂಕು ಪಂಚಾಯ್ತಿ ಇಒ ಟಿ.ಆರ್. ಮಲ್ಲಾಡದ ಚಾಲನೆ ನೀಡಿದರು.

ಮಂಗಳವಾರ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ನರೇಗಾ ಯೋಜನೆಯಡಿಯ ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಳನ್ನು ಬೆಳಯಲು ಈ ಯೋಜನಯಡಿಯಲ್ಲಿ ಅವಕಾಶವಿದೆ.

ಗ್ರಾಮ ಪಂಚಾಯ್ತಿಗಳಿಂದ ವೈಯಕ್ತಿಕ ಕಾಮಗಾರಿ ಕೈಕೊಳ್ಳಲು ಗ್ರಾಮೀಣ ಭಾಗದ ರೈತರಿಗೆ ಅವಕಾಶವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

2025-26 ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆಗೆ ರೈತರು ತಮಗೆ ಅವಶ್ಯಕ ಕಾಮಗಾರಿಗಳ ಬೇಡಿಕೆ ಸಲ್ಲಿಸಬೇಕು ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಲು ಸೂಚನೆ ನೀಡಿದರು.


Spread the love

About Laxminews 24x7

Check Also

ರಾಯಬಾಗದಲ್ಲಿ ಕೆರೆ ತುಂಬಿಸುವ ಯೋಜನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ

Spread the love ರಾಯಬಾಗದಲ್ಲಿ ಕೆರೆ ತುಂಬಿಸುವ ಯೋಜನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ಹಳೆ ದಿಗ್ಗೇವಾಡಿ ಮತ್ತು ಇಂಗಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ