ಬೆಳಗಾವಿ: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ರಾಷ್ಟ್ರೀಯ ಖ್ಯಾತಿಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಮುನ್ಬಾ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕರಾಗಿರುವ ಸಾಧು ಕೋಕಿಲ ಮತ್ತು ಜೀ ಕನ್ನಡ ಸರಿಗಮಪ ತಂಡದವರು ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ.