Breaking News

ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾವು

Spread the love

ಧಾರವಾಡ : ಲಾರಿ ಮತ್ತು ಆಟೋ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಏಳು ವರ್ಷದ ಬಾಲಕ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಇಲ್ಲಿಯ ಕೆಲಗೇರಿ ರಸ್ತೆಯ ಸಂಪಿಗೆ ನಗರದಲ್ಲಿ ರವಿವಾರ(ಅ 20) ನಡೆದಿದೆ.

ಬೆಳಗಿನ ಇಂಟರ್‌ಸಿಟಿ ರೈಲು ಮೂಲಕ ಬ್ಯಾಡಗಿಗೆ ಆಟೋ ಮೂಲಕ ರೈಲು ನಿಲ್ದಾಣಕ್ಕೆ ಹೊರಟಿದ್ದ ಕೆಲಗೇರಿಯ ಹಂಚಿನಮನಿ ಕುಟುಂಬದ ಇಬ್ಬರು ಮಕ್ಕಳು ಸೇರಿ ಐವರ ಪೈಕಿ ಆಟೋ ಚಾಲಕ ರಮೇಶ ಹಂಚಿನಮನಿ (35), ಹತ್ತಿರದ ಸಂಬಂಧಿ ಮರೆವ್ವ ಹಂಚಿಮನಿ (55) ಆಕೆಯ ಮೊಮ್ಮಗ ಪ್ರಣವ (7) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಆಟೋದಲ್ಲಿದ್ದ ಮರೆವ್ವನ ಸೊಸೆ ರೇಣುಕಾ (25) ಹಾಗೂ ಇನ್ನೊಬ್ಬ ಮೊಮ್ಮಗ ಪೃಥ್ವಿ (4) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ದಾಖಲಿಸಲಾಗಿದೆ. ಇವರ ಸ್ಥಿತಿಯೂ ಗಂಭೀರವಾಗಿದೆ.

ರಸ್ತೆ ಮಧ್ಯೆ ಮಲಗಿದ್ದ ಬಿಡಾಡಿ ದನ ತಪ್ಪಿಸಲು ಹೋಗಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಟ್ರಾಫಿಕ್ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ