Breaking News

ಕಡೆಗೂ MLC ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್ ರಾಜೀನಾಮೆ​! ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

Spread the love

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಇಂದು (ಅ.21) ರಾಜೀನಾಮೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೃಹ ಕಚೇರಿಗೆ ಸೋಮವಾರ ಸಂಜೆ‌ ಆಗಮಿಸಿದ ರಾಜೀನಾಮೆ ಪತ್ರ ನೀಡಿದರು.

ಕಡೆಗೂ MLC ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್ ರಾಜೀನಾಮೆ​! ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಇನ್ನು ರಾಜೀನಾಮೆ ಘೋಷಿಸಿದ ಬಳಿಕ ಮಾತನಾಡಿದ ಅವರು, ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದಿದ್ದಾರೆ. ಬಸವರಾಜ ಹೊರಟ್ಟಿ ಅವರ ನಿವಾಸದಲ್ಲಿ ತಮ್ಮ ನಿರ್ಧಾರವನ್ನು ಬಹಿರಂಗವಾಗಿ ತಿಳಿಸಿದ್ದಾರೆ. ಪರಿಷತ್​ನ ಸಭಾಪತಿಗೆ ರಾಜೀನಾಮೆ ಪತ್ರ ಕೊಟ್ಟ ಬೆನ್ನಲ್ಲೇ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಉಪಚುನಾವಣಾ ಕಣಕ್ಕಿಳಿಯಲಿದ್ದೇನೆ ಎಂದು ಹೇಳಿದ್ದಾರೆ.

 


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ