Breaking News

ಲಿಂಗತ್ವ ಅಲ್ಪ ಸಂಖ್ಯಾತರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ’

Spread the love

ಳ್ಳಾರಿ: ಲಿಂಗತ್ವ ಅಲ್ಪ ಸಂಖ್ಯಾತರಿಗೆ ವಸತಿ ಸೌಲಭ್ಯ ನೀಡಬೇಕು, ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಅ.24 ರಂದು ಸ್ವಾಭಿಮಾನಿ ನಡಿಗೆ ಹೆಸರಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ‘ಸಂಗಮ’ ಸಂಘಟನೆಯ ಬಳ್ಳಾರಿ, ವಿಜಯನಗರ ಸಂಯೋಜಕಿ ಚಾಂದಿನಿ ತಿಳಿಸಿದರು.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಿಂಗತ್ವ ಅಲ್ಪ ಸಂಖ್ಯಾತರು ಸಮಾಜದ ಒಂದು ಭಾಗ. ಸ್ವಾಭಿಮಾನಿಗಳಾದ ನಮಗೂ ಹಕ್ಕುಗಳು ಸಿಗಬೇಕು. ಸಮಾಜದಲ್ಲಿ ನಮ್ಮನ್ನು ಹೀನವಾಗಿ ನೋಡಲಾಗುತ್ತದೆ. ವಸತಿ, ನೌಕರಿ, ಜೀವನಕ್ಕಾಗಿ ಲೈಂಗಿಕ ಕೃತ್ಯ, ಭಿಕ್ಷಾಟನೆ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಲಿಂಗತ್ವ ಅಲ್ಪ ಸಂಖ್ಯಾತರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಮೀಸಲಾತಿಯ ಪ್ರಕಾರ ಶೇ 1 ರಷ್ಟು ಉದ್ಯೋಗ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ದಾವಣಗೆರೆಯಲ್ಲಿ ಸಚಿವ ಎಸ್​.ಎಸ್​. ಮಲ್ಲಿಕಾರ್ಜುನ್​ ಅವರನ್ನು ಡಿಸಿಎಂ ಮಾಡಬೇಕೆಂಬ ಕೂಗು ಕೇಳಿಬಂದಿದೆ.

Spread the loveದಾವಣಗೆರೆ: ಕಾಂಗ್ರೆಸ್​ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವುದರ ನಡುವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ