ಕುಂದಾಪುರ: ಹಾಡಹಗಲೇ ಜನನಿಬಿಡ ಪ್ರದೇಶವಾದ ಹಂಗಳೂರಿನ ಬ್ರಹ್ಮಗುಡಿ ರಸ್ತೆಯಲ್ಲಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಹಣ ಹಾಗೂ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಗುರುವಾರ ನಡೆದಿದೆ.
ಬ್ರಹ್ಮಗುಡಿಯ ಜಗದೀಶ್ ಚಂದ್ರ ನಾಯರ್ ಅವರ ಮನೆಗೆ ಗುರುವಾರ ಮಧ್ಯಾಹ್ನ 2ರಿಂದ 4 ಗಂಟೆಯ ಮಧ್ಯದ ಅವಧಿಯಲ್ಲಿ ನುಗ್ಗಿದ ಕಳ್ಳರು ಮನೆಯೊಳಗಿದ್ದ ಸುಮಾರು 25-30 ಸಾವಿರ ರೂ.
ಹಾಗೂ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ. ಕಳವಾಗಿರುವ ಸೊತ್ತುಗಳ ನಿಖರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.
ಜಗದೀಶ್ ಕುಂದಾಪುರದಲ್ಲಿ ಪ್ರಿಂಟಿಂಗ್ ಪ್ರಸ್ ಕೆಲಸ ಮಾಡಿಕೊಂಡಿದ್ದು, ಪತ್ನಿಯೂ ಅವರ ಜತೆಯಲ್ಲೇ ಇರುತ್ತಾರೆ. ಮಧ್ಯಾಹ್ನ 2 ಗಂಟೆಗೆ ಇಬ್ಬರು ಊಟ ಮಾಡಿ ಮನೆಯಿಂದ ತೆರಳಿದ್ದಾರೆ. ಸಂಜೆ 4 ಗಂಟೆಗೆ ಪುತ್ರಿಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುವ ವೇಳೆ ಜಗದೀಶ್ ಅವರಿಗೆ ಮನೆಯ ಹಿಂಬದಿಯ ಬಾಗಿಲು ಒಡೆದು, ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.
Laxmi News 24×7