Breaking News

ಬೆಳಗಾವಿ-ಬೆಂಗಳೂರು ವಿಮಾನ ಸೇವೆ ಸ್ಥಗಿತಗೊಳಿಸದಂತೆ ಸಚಿವರಿಗೆ ಸಂಸದೆ ಪತ್ರ

Spread the love

ಬೆಳಗಾವಿ: ‘ಬೆಳಗಾವಿ-ಬೆಂಗಳೂರು ಮಾರ್ಗವಾಗಿ ಪ್ರತಿದಿನ ಬೆಳಿಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದ ಇಂಡಿಗೋ ಸಂಸ್ಥೆಯ ವಿಮಾನ ಸೇವೆ ಸ್ಥಗಿತಗೊಳಿಸಬಾರದು’ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು, ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

 

‘ಈ ವಿಮಾನಕ್ಕೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳಿ, ತುರ್ತು ಕೆಲಸ ಮುಗಿಸಿಕೊಂಡು ಒಂದೇ ದಿನದಲ್ಲಿ ವಾಪಸಾಗಲು ಅನುಕೂಲವಾಗಿತ್ತು. ಆದರೆ, ಅ.27ರಿಂದ ಈ ಸೇವೆ ಸ್ಥಗಿತಗೊಳಿಸುತ್ತಿರುವ ಮಾಹಿತಿ ಬಂದಿದೆ. ಈ ಸೇವೆ ಸ್ಥಗಿತವಾದರೆ, ಈ ಭಾಗದ ವಾಣಿಜ್ಯ ಚಟುವಟಿಕೆಗೆ ಹೊಡೆತ ಬೀಳಲಿದೆ. ಹಾಗಾಗಿ ಈ ನಿರ್ಧಾರ ಕೈಬಿಟ್ಟು, ಸೇವೆ ಮುಂದುವರಿಸಬೇಕು’ ಎಂದು ಕೋರಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the loveಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ