Breaking News

ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ

Spread the love

ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಅಜ್ಜಂಪೀರ್ ಖಾದ್ರಿ ಇಂದು ನಾಮಪತ್ರ ಹಿಂಪಡೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಅಜ್ಜಂಪೀರ್ ಖಾದ್ರಿ ಮನವೊಲಿಕೆ ನಡೆದಿತ್ತು.

ಈ ಹಿನ್ನೆಲೆಯಲ್ಲಿ ಇಂದು ಸಚಿವ ಜಮೀರ್ ಅಹ್ಮದ್, ಶಿವಾನಂದ ಪಾಟೀಲ್ ಜೊತೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.

ನ.13ರಂದು ನಡೆಯಲಿರುವ ಉಪಚುನವಣೆ ಹಿನ್ನೆಲೆಯಲ್ಲಿ ನಾಮಪತ್ರ ವಾಪಾಸ್ ಪಡೆಯಲು ಇಂದು ಕೊನೆ ದಿನವಾಗಿತ್ತು. ಮಧ್ಯಾಹ್ನ 3ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ