Breaking News

ದೇವೇಗೌಡರ ಆರೋಗ್ಯದ ಬಗ್ಗೆ ಅಪಹಾಸ್ಯ; ಡಿ.ಕೆ.ಸುರೇಶ್ ವಿರುದ್ಧ ಕುಮಾರಸ್ವಾಮಿ ಕಿಡಿ

Spread the love

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಂಬುಲೆನ್ಸ್‌ನಲ್ಲಿ ಬಂದು ಪ್ರಚಾರ ಮಾಡುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Contentsಜೆಡಿಎಸ್ ತಿರುಗೇಟುಆತ್ಮಸಾಕ್ಷಿ ಪ್ರಶ್ನೆ ಮಾಡಿಕೊಳ್ಳಿ

ದೇವೇಗೌಡರ ಆರೋಗ್ಯದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ದೇವೇಗೌಡರು ಬರುತ್ತಿರುವುದು ಮೊಮ್ಮಗನ ಪಟ್ಟಾಭಿಷೇಕಕ್ಕೆ ಎನ್ನುತ್ತಿದ್ದಾರೆ. ಈ ರೀತಿಯ ಸಣ್ಣತನದ ಮಾತಿಗೆ ಕಾಲವೇ ಉತ್ತರ ಕೊಡುತ್ತದೆ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಜೆಡಿಎಸ್ ತಿರುಗೇಟು

ದೇವೇಗೌಡರು ಆಂಬ್ಯುಲೆನ್ಸ್ ನಲ್ಲಿ ಬಂದು ಪ್ರಚಾರ ಮಾಡುತ್ತಾರೆ ಎಂದು, ಅವರ ಆರೋಗ್ಯದ ಬಗ್ಗೆ ಅಪಹಾಸ್ಯ ಮಾಡಿರುವ ಡಿ.ಕೆ.ಸುರೇಶ್‌ಗೆ ಜೆಡಿಎಸ್, ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ ತಿರುಗೇಟು ನೀಡಿದೆ.
ರೈತನಾಯಕ, ನೀರಾವರಿಗಳ ಹರಿಕಾರರು, ಮಾಜಿ ಪ್ರಧಾನಿ ದೇವೇಗೌಡರು ನಾಡಿಗೆ ಕೊಟ್ಟಿರುವ ಕೊಡುಗೆಗಳು ಅಪಾರ. ದೇವೇಗೌಡರು ಹುಟ್ಟು ಹೋರಾಟಗಾರರು. ಕಾಂಗ್ರೆಸ್ ಮತ್ತು ತಾವು ಮರೆತಿರಬಹುದು ಹಿಂದೆ ಚನ್ನಪಟ್ಟಣದ ವಿಟ್ಲೇನಹಳ್ಳಿ ಗೋಲಿಬಾರ್ ನಿಮ್ಮದೇ ಕಾಂಗ್ರೆಸ್ ಸರ್ಕಾರ ನಡೆಸಿತ್ತು. ಆಗಲೂ ದೇವೇಗೌಡರು ಚನ್ನಪಟ್ಟಣದಿಂದ ಬೆಂಗಳೂರಿನ ತನಕ ರೈತರಿಗೆ ನ್ಯಾಯ ಕೊಡಿಸಲು ಪಾದಯಾತ್ರೆ ಮಾಡಿದ್ದರು ಎಂದು ಹೇಳಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ