Breaking News

ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಎರಡು ಪಟ್ಟು ಏರಿಕೆ

Spread the love

ಬೆಂಗಳೂರು, ಅಕ್ಟೋಬರ್ 31: ಕರ್ನಾಟಕ 50ನೇ ವರ್ಷದ ಸಂಭ್ರಮಾಚದರಣೆಯಲ್ಲಿದೆ. ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 50 ಮಹಿಳಾ ಸಾಧಕಿಯರು ಹಾಗೂ 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದೆ. ಇದೀಗ ಅದರ ಮೊತ್ತವನ್ನು ಹೆಚ್ಚಿಸಿದೆ.

Award: ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ಎರಡು ಪಟ್ಟು ಏರಿಕೆ

ನವೆಂಬರ್ 1ರಂದು ನಡೆಯಲಿರುವ ಕನ್ನಡೋತ್ಸವ ಸಂಭ್ರಮಾಚರಣೆಯಲ್ಲಿ ಈ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಿ ಸಾಧಕರನ್ನು ಗೌರವಿಸಲಾಗಿತ್ತು. ಈ ಪ್ರಶಸ್ತಿಯ ಮೊತ್ತವನ್ನು 50,000 ಎಂದು ಮೊದಲು ತಿಳಿಸಲಾಗಿತ್ತು. ಇದೊಂದು ಐತಿಹಾಸಿಕ ಸಂದರ್ಭ ವಾಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ ರೂ.1ಲಕ್ಷಗಳಿಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸದಿರು.

ಪ್ರಶಸ್ತಿ ಮೊತ್ತವನ್ನು ಹೆಚ್ಚಳಕ್ಕೆ ಕಾರಣವಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಚಿವರು ಇದೇ ವೇಳೆ ಅಭಿನಂದನೆ ತಿಳಿಸಿದರು.


Spread the love

About Laxminews 24x7

Check Also

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Spread the loveಮೈಸೂರು: ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ