ಬೆಂಗಳೂರು, ಅಕ್ಟೋಬರ್ 31: ಕರ್ನಾಟಕ 50ನೇ ವರ್ಷದ ಸಂಭ್ರಮಾಚದರಣೆಯಲ್ಲಿದೆ. ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 50 ಮಹಿಳಾ ಸಾಧಕಿಯರು ಹಾಗೂ 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದೆ. ಇದೀಗ ಅದರ ಮೊತ್ತವನ್ನು ಹೆಚ್ಚಿಸಿದೆ.

ನವೆಂಬರ್ 1ರಂದು ನಡೆಯಲಿರುವ ಕನ್ನಡೋತ್ಸವ ಸಂಭ್ರಮಾಚರಣೆಯಲ್ಲಿ ಈ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಿ ಸಾಧಕರನ್ನು ಗೌರವಿಸಲಾಗಿತ್ತು. ಈ ಪ್ರಶಸ್ತಿಯ ಮೊತ್ತವನ್ನು 50,000 ಎಂದು ಮೊದಲು ತಿಳಿಸಲಾಗಿತ್ತು. ಇದೊಂದು ಐತಿಹಾಸಿಕ ಸಂದರ್ಭ ವಾಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ ರೂ.1ಲಕ್ಷಗಳಿಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸದಿರು.
ಪ್ರಶಸ್ತಿ ಮೊತ್ತವನ್ನು ಹೆಚ್ಚಳಕ್ಕೆ ಕಾರಣವಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಚಿವರು ಇದೇ ವೇಳೆ ಅಭಿನಂದನೆ ತಿಳಿಸಿದರು.
Laxmi News 24×7