Breaking News

ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ವಿಮಾ ರಕ್ಷಣೆ

Spread the love

ಕೊಟ್ಟಾಯಂ: ಈ ತಿಂಗಳಾಂತ್ಯದಲ್ಲಿ ಆರಂಭವಾಗಲಿರುವ ಶಬರಿಮಲೆ (ಮಂಡಲಂ-ಮಕರವಿಳಕ್ಕು) ಯಾತ್ರೆಯ ಅವಧಿಯಲ್ಲಿ ಅಯ್ಯಪ್ಪ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳು ಐದು ಲಕ್ಷ ರೂಪಾಯಿಗಳ ಉಚಿತ ವಿಮಾ ರಕ್ಷಣೆಯನ್ನು ಪಡೆಯಲಿದ್ದಾರೆ.

ಈ ವರ್ಷ ಶಬರಿಮಲೆಗೆ ಬರುವ ಎಲ್ಲಾ ಯಾತ್ರಾರ್ಥಿಗಳಿಗೆ ದೇಗುಲವನ್ನು ನಿರ್ವಹಿಸುವ ಅಪೆಕ್ಸ್ ದೇವಸ್ಥಾನದ ಸಂಸ್ಥೆಯಾದ ತಿರುವಾಂಕೂರು ದೇವಸ್ವಂ ಬೋರ್ಡ್ (ಟಿಡಿಬಿ) ವಿಮಾ ಸೌಲಭ್ಯವನ್ನು ಒದಗಿಸಲಿದೆ ಎಂದು ರಾಜ್ಯ ದೇವಸ್ವಂ ಸಚಿವ ವಿ.ಎನ್. ವಾಸವನ್ ಹೇಳಿದ್ದಾರೆ.

Sabarimala; ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ವಿಮಾ ರಕ್ಷಣೆ

ಎಲ್ಲಾ ಯಾತ್ರಾರ್ಥಿಗಳಿಗೆ ಸುಗಮ ದರ್ಶನವಾಗಲು ಬೆಟ್ಟದ ದೇಗುಲದಲ್ಲಿ ವ್ಯವಸ್ಥೆಗಳನ್ನು ಪೂರ್ಣಗೊಳಿಸಲಾಗಿದೆ. ಐದು ಲಕ್ಷ ರೂ.ಗಳ ವಿಮಾ ರಕ್ಷಣೆಯಡಿ ಒಂದು ವೇಳೆ ಯಾತ್ರಾರ್ಥಿಗಳು ಸಾವನ್ನಪ್ಪಿದರೆ, ಮೃತದೇಹವನ್ನು ಮನೆಗೆ ತರಲು ದೇವಸ್ವಂ ಮಂಡಳಿಯು ಎಲ್ಲಾ ವ್ಯವಸ್ಥೆಗಳನ್ನು ಮಾಡಲಿದೆ ಎಂದು ವಾಸವನ್ ಸುದ್ದಿಗಾರರಿಗೆ ತಿಳಿಸಿದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ