Breaking News

ದಾರಿ ಮಧ್ಯೆಯೇ ಕೆಟ್ಟು ನಿಂತ ನಟ ಗುರುಪ್ರಸಾದ್ ಶವ ಸಾಗಿಸುತ್ತಿದ್ದ ಆಂಬುಲೆನ್ಸ್

Spread the love

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ದಾರಿಯ ಮಧ್ಯೆಯೇ ಆಂಬುಲೆನ್ಸ್ ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ.

ಗುರುಪ್ರಸಾದ್ ಅವರು ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿದ್ದಂತ ಬಾಡಿಗೆ ಫ್ಲ್ಯಾಟ್ ನಲ್ಲಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.

ಸ್ಥಳಕ್ಕೆ ತೆರಳಿದ್ದಂತ ಪೊಲೀಸರು, ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು.

ನಟ ಗುರುಪ್ರಸಾದ್ ಶವವನ್ನು ಸಾಗಿಸುತ್ತಿದ್ದಂತ ಆಂಬುಲೆನ್ಸ್ ಯಶವಂತಪುರ ಬಳಿಯಲ್ಲಿ ದಾರಿ ಮಧ್ಯೆಯೇ ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ. ಆಂಬುಲೆನ್ಸ್ ಕೆಟ್ಟು ನಿಂತ ಕಾರಣ, ಮತ್ತೊಂದು ಆಂಬುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ಗುರುಪ್ರಸಾದ್ ಪಾರ್ಥೀವ ಶರೀರವನ್ನು ಸಾಗಿಸಲಾಗಿದೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ