Breaking News

ಗೃಹಲಕ್ಷ್ಮಿ’ ಹಣದಿಂದ ಖಾರ ಕುಟ್ಟುವ ಯಂತ್ರ ಖರೀದಿಸಿದ ಮಹಿಳೆ

Spread the love

ಎಂ.ಕೆ.ಹುಬ್ಬಳ್ಳಿ: ಗೃಹಲಕ್ಷ್ಮಿ ಯೋಜನೆಯಡಿ ಬಂದ 11 ಕಂತು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪಡೆದ ಸಾಲ ಸೇರಿದಂತೆ ₹45 ಸಾವಿರ ಹಣದಲ್ಲಿ ಬೆಳಗಾವಿ ತಾಲ್ಲೂಕಿನ ಕುಕಡೊಳ್ಳಿಯಲ್ಲಿ ತಾಯವ್ವ ಲಕಮೋಜಿ ಅವರು, ಖಾರ ಕುಟ್ಟುವ ಯಂತ್ರ ಖರೀದಿಸಿದ್ದಾರೆ. ಈ ಮೂಲಕ ಸ್ವಾವಲಂಬಿ ಬದುಕಿಗೆ ಹೆಜ್ಜೆ ಇರಿಸಿದ್ದಾರೆ.

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು, ಭಾನುವಾರ ಕುಕಡೊಳ್ಳಿಗೆ ಈ ಯಂತ್ರ ಉದ್ಘಾಟಿಸಿದರು.

‘ಗೃಹಲಕ್ಷ್ಮಿ ಯೋಜನೆ ಬಡ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸಿದೆ. ಈ ಯೋಜನೆ ಹಲವು ಮಹಿಳೆಯರು ಬದುಕು ಕಟ್ಟಿಕೊಂಡಿದ್ದಾರೆ. ಯೋಜನೆಯ ಸಾರ್ಥಕತೆಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ?’ ಎಂದರು.‌

‘ಬಡತನದಲ್ಲೇ ಬದುಕು ಸಾಗಿಸುವ ನಮ್ಮಂಥವರಿಗೆ ಗೃಹಲಕ್ಷ್ಮಿ ಯೋಜನೆ ಆಸರೆಯಾಗಿದೆ. ಈ ಯೋಜನೆಯಡಿ ಬಂದ ₹22 ಸಾವಿರ ಮತ್ತು ಸಾಲದ ಹಣವನ್ನೂ ಸೇರಿಸಿ ಖಾರದ ಗಿರಣಿ ಯಂತ್ರ ಖರೀದಿಸಿದ್ದೇನೆ’ ಎಂದು ತಾಯವ್ವ ಲಕಮೋಜಿ ಹೇಳಿದರು.

ಚನ್ನಬಸಯ್ಯ ಹಿರೇಮಠ, ಬಸಯ್ಯ ಚಿಕ್ಕಮಠ, ವೀರನಗೌಡ ಪಾಟೀಲ, ತಾಯಪ್ಪ ಮರಕಟ್ಟಿ, ಪುಂಡಲಿಕ ಬೈರೋಜಿ, ಕಲ್ಲಪ್ಪ ವಡ್ಡಿನ, ಪರಶುರಾಮ ಕುರುಬರ ಇತರರಿದ್ದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ