Breaking News

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Spread the love

ಯಾದಗಿರಿ: ಈ ಹಿಂದಿನ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಸರಕಾರದಲ್ಲಿ ವಕ್ಫ್ ವಿಚಾರವಾಗಿ ರೈತರಿಗೆ ನೋಟಿಸ್ ಕೊಟ್ಟಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು.

ಯಾದಗಿರಿಯಲ್ಲಿ ಸೋಮವಾರ (ನ.04) ಮಾತನಾಡಿದ ಅವರು, ನಿಜವಾಗಿ ರೈತರಿಗೆ ಭೂಮಿ ಕೊಟ್ಟಿದ್ದು ಕಾಂಗ್ರೆಸ್, ಉಳುವವನೇ ಭೂಮಿಯ ಒಡೆಯ ಕಾಯ್ದೆ ಜಾರಿಗೆ ತಂದು ರೈತರಿಗೆ ಭೂಮಿ ನೀಡಿದ್ದು ಕಾಂಗ್ರೆಸ್ ಪಕ್ಷವಾಗಿದೆ.

ಈಗ ಕಾಂಗ್ರೆಸ್ ಸರಕಾರ ರೈತರ ಭೂಮಿ ವಾಪಸ್ ಪಡೆಯುವ ಕೆಲಸ ಮಾಡಲ್ಲ ಎಂದು ಸ್ಪಷ್ಟನೆ ನೀಡಿದರು.

ವಕ್ಫ್ ನೊಟೀಸ್ ಆದೇಶ ವಾಪಸ್ ಪಡೆಯಲಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯನವರು ಹಾಗೂ ಡಿಸಿಎಂ ಡಿ.ಕೆ ಅವರು ಹೇಳಿದ್ದಾರೆ ಎಂದರು.

ವಕ್ಫ್ ಟ್ರಬುನಲ್ ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಹೇಳಿಕೆಗೆ ಉಗ್ರಪ್ಪ ತಿರುಗೇಟು ನೀಡಿದ ಅವರು ಯತ್ನಾಳ್ ಟ್ರಬುನಲ್ ತೆಗೆದು ಹಾಕಬೇಕೆಂದು ಹೇಳುತ್ತಾರೆ, ನಿಮಗೆ ತಾಕತ್ತಿದ್ದರೆ ಮೋದಿಗೆ ಹೇಳಿ ಟ್ರಬುನಲ್ ತೆಗೆದು ಹಾಕಬೇಕೆಂದು ಎಂದು ಉಗ್ರಪ್ಪ ಸವಾಲೆಸಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ