Breaking News

ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ

Spread the love

ಹಾವೇರಿ: ಶಿಗ್ಗಾವಿಯಲ್ಲಿ ಅಜ್ಜಂಪೀರ್ ಖಾದ್ರಿ ಪ್ರಬಲ ಆಕಾಂಕ್ಷಿಯಾಗಿದ್ದರು. ಮೊದಲನೆ ಹೆಸರಾಗಿ ಖಾದ್ರಿಯವರನ್ನು ಕೇಂದ್ರಕ್ಕೆ ಕಳುಹಿಸಿದ್ದೆವು. ಖಾದ್ರಿಯವರು ನಾಲ್ಕು ಸಲ ಕಡಿಮೆ ಅಂತರದಲ್ಲಿ ಸೋತರು. ಖಾದ್ರಿ ಅಭ್ಯರ್ಥಿ ಮಾಡಲು ಹಲವರು ನಾಮಪತ್ರ ಹಾಕಿಸಿದ್ದರು.

ಖಾದ್ರಿ ನನ್ನ ಮಾತಿಗೆ ಕಟ್ಟು ಬಿದ್ದು ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಹುಲಗೂರು ಗ್ರಾಮದಲ್ಲಿ ಸೋಮವಾರ (ನ.04) ಚುನಾವಣಾ ಪ್ರಚಾರದಲ್ಲಿ ಖಾದ್ರಿ ಹೆಗಲ ಮೇಲೆ ಕೈ ಹಾಕಿಕೊಂಡೆ ಸಿದ್ದರಾಮಯ್ಯ ಭಾಷಣ ಮಾಡಿದರು. ಖಾದ್ರಿಯವರು ಅಭ್ಯರ್ಥಿ ಪಠಾಣ ಗೆಲ್ಲಿಸಲು ಪಣ ತೊಟ್ಟಿದ್ದಾರೆ ಎಂದರು.

ಭರತ್ ಬೊಮ್ಮಾಯಿಗೂ ಈ ಕ್ಷೇತ್ರಕ್ಕೂ ಸಂಬಂಧವಿಲ್ಲ. ಇಬ್ಬರು ಮಾಜಿ ಸಿಎಂಗಳ ಕುಟುಂಬದ ಭರತ್ ಬಿಜೆಪಿ ಅಭ್ಯರ್ಥಿಯಾಗಿದ್ದಾನೆ. ಬೊಮ್ಮಾಯಿ ಮಗನನ್ನ ನೀನು ಕೆಡವಬೇಕು ಎಂದು ಸಿಎಂ ಹೇಳಿದರು.

ಬಿಜೆಪಿ ಒಂದು ಸುಳ್ಳಿನ ಪಕ್ಷ, ಭ್ರಷ್ಟಾಚಾರದ ಪಕ್ಷ. ಭ್ರಷ್ಟಾಚಾರ ಜನತಾ ಪಾರ್ಟಿ ಎಂದು ಕರೆಯುತ್ತೇವೆ. 40% ಕಮಿಷನ್ ಪದ ಬಂದಿದ್ದೆ ಬೊಮ್ಮಾಯಿ ಸಿಎಂ ಆದಾಗ. ಕೋವಿಡ್ ಬಂದಾಗ ಹೆಣಗಳಿಂದಲು ಲಂಚ ಪಡೆಯಲು ಶುರು ಮಾಡಿದ್ದರು. ಹೆಣಗಳಿಂದ ಲಂಚ ಪಡೆದ ಮುಖ್ಯಮಂತ್ರಿ ಇದ್ದರೆ ಅದು ಬಸವರಾಜ್ ಬೊಮ್ಮಾಯಿ. 40% ಕಮಿಷನ್ ಪಡೆಯುತ್ತಿದ್ದ, ಸತ್ತ ಹೆಣಗಳಿಂದ ಲಂಚ ಪಡೆಯುತ್ತಿದ್ದ ಬೊಮ್ಮಾಯಿ ಮಗ ಗೆಲ್ಲಬೇಕಾ? ರಾಜ್ಯವನ್ನು ಲೂಟಿ ಹೊಡೆದವರನ್ನು ಮತ್ತೆ ಗೆಲ್ಲಿಸಬೇಕಾ ಎಂದು ಸಿಎಂ ಹೇಳಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ