Breaking News

“ಲೇ ಜಮೀರ್” ಎಂದ ಪುನೀತ್‌ ಕೆರೆಹಳ್ಳಿ ರಾತ್ರೋರಾತ್ರಿ ಬಂಧನ!

Spread the love

ಚಿವ ಜಮೀರ್‌ ಅಹಮದ್‌ ಬಗ್ಗೆ ಬೇಕಾಬಿಟ್ಟಿ ಮಾತನಾಡಿದ್ದ ಹಿಂದೂ ಮುಖಂಡ ಪುನೀತ್‌ ಕೆರೆಹಳ್ಳಿಗೆ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಗುನ್ನಾ ಕೊಟ್ಟಿದ್ದಾರೆ. ಜಮೀರ್‌ ಅಹಮದ್‌ ಖಾನ್‌ ಅವರು ಕೇಂದ್ರ ಸಂಸದ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿದ್ದ ಹೇಳಿಕೆಗೆ ರಿಯಾಕ್ಟ್‌ ಮಾಡಿದ್ದ ಪುನೀತ್‌ ಕೆರೆಹಳ್ಳಿ ಅವರು ಬೇಕಾಬಿಟ್ಟಿ ಮಾತನಾಡಿದ್ದರು.

ಈ ಸಂಬಂಧ ವಿಡಿಯೋವೊಂದನ್ನು ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪುನೀತ್‌. ಜಮೀರ್‌ ಅವರ ಬಗ್ಗೆ ಏ ಜಮೀರ್ ಎಂದು ಏಕವಚನದಲ್ಲೇ ಮಾತನಾಡಿದ್ದರು.

ಇದೀಗ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಧರ್ಮ ಮತ್ತು ಜಾತಿ ನಿಂದನೆ ಮಾಡಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


Spread the love

About Laxminews 24x7

Check Also

ಕಾವೇರಿ 2.0 ತಂತ್ರಾಂಶದ ಕಾನೂನು ಗೊಂದಲಗಳ ಪರಿಷ್ಕರಣೆಗೆ ಹೈಕೋರ್ಟ್ ಸೂಚನೆ

Spread the love ಬೆಂಗಳೂರು: ಪ್ರಸ್ತುತ ಚಾಲ್ತಿಯಲ್ಲಿರುವ ಕಾವೇರಿ 2.0 ತಂತ್ರಾಂಶ ಕಾನೂನು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಹಾಗಾಗಿ ಅದರಲ್ಲಿ ‘ಮ್ಯುಟೇಷನ್ ಆಧಾರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ