Breaking News

ಕೋವಿಡ್​ ಹಗರಣದ ತನಿಖೆಗೆ SIT ರಚನೆ; ಯಡಿಯೂರಪ್ಪ, ಶ್ರೀರಾಮುಲುಗೆ ಈಗ ಎಸ್‌ ಐ ಟಿ ಸಂಕಷ್ಟ

Spread the love

ಬೆಂಗಳೂರು, ನವೆಂಬರ್‌ 14: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಹಗರಣದ ತನಿಖೆಯನ್ನು ಈಗಿನ ಕಾಂಗ್ರೆಸ್ ಸರ್ಕಾರ ನಿವೃತ್ತ ನ್ಯಾಯಮೂರ್ತಿಯ ಮೂಲಕ ನಡೆಸಲು ತೀರ್ಮಾನಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೋವಿಡ್ ಹಗರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ಸಂಪುಟ ಅಸ್ತು ಎಂದಿದ್ದು, ಯಡಿಯೂರಪ್ಪ ಹಾಗೂ ಶ್ರೀರಾಮುಲುಗೆ ಎಸ್‌ ಐ ಟಿ ಸಂಕಷ್ಟ ಎದುರಾಗಿದೆ.

ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಜೊತೆಗೆ ಕಾನೂನು ಸಚಿವ ಎಚ್.ಕೆ ಪಾಟೀಲ ಮಾತನಾಡಿ, ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ತನಿಖಾ ವರದಿಯ ನಂತರ ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಅಧಿಕಾರಿಗಳು ಅಧಿಕಾರಸ್ಥ ರಾಜಕಾರಣಿಗಳ ಅಪವಿತ್ರ ಮೈತ್ರಿಯ ಫಲವಾಗಿ ನಡೆದ ಭ್ರಷ್ಟಾಚಾರ, ಹಗರಣಗಳ ಕುರಿತು ಸತ್ಯಾಂಶಗಳು ಲಭ್ಯವಾಗಿದ್ದವು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ