Breaking News

ವಾಟ್ಸ್‌ಆಯಪ್ ನಿಷೇಧ ಕೋರಿದ್ದ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Spread the love

ವದೆಹಲಿ: ಐಟಿ ನಿಯಮಗಳನ್ನು ಪಾಲಿಸದ ವಾಟ್ಸ್‌ಆಯ‍ಪ್‌ಗೆ ನಿಷೇಧ ಹೇರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋ‌ರ್ಟ್ ಗುರುವಾರ ತಳ್ಳಿ ಹಾಕಿದೆ.

ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಹಾಗೂ ಅರವಿಂದ ಕುಮಾರ್ ಅವರಿದ್ದ ನ್ಯಾಯ‍ಪೀಠ ಈ ಬಗ್ಗೆ ತೀರ್ಪು ನೀಡಿದೆ.ವಾಟ್ಸ್‌ಆಯಪ್ ನಿಷೇಧ ಕೋರಿದ್ದ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಸರ್ಕಾರ ಹೊರಡಿಸಿರುವ ಐಟಿ ನಿಯಮಗಳನ್ನು ವಾಟ್ಸ್‌ಆಯಪ್‌ ಪಾಲಿಸುತ್ತಿಲ್ಲ. ಹೀಗಾಗಿ ಅದನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಓಮನ್‌ಕುಟ್ಟನ್ ಕೆ.ಜಿ. ಎಂಬುವವರು ಕೇರಳ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು.

2021ರಲ್ಲಿ ಕೇರಳ ಹೈಕೋರ್ಟ್ ಅದನ್ನು ತಿರಸ್ಕರಿಸಿತ್ತು. ಅಲ್ಲದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ